Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...