Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...