Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...