Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಯೋಗೋದ್ಯಮಿ ಬಾಬಾ ರಾಮ್‌ದೇವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಈ ಬಾರಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿದೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಸಭೆಯೊಂದರಲ್ಲಿ ರಾಮ್‌ದೇವ್ ಅವರು ಮಾತನಾಡುತ್ತಾ, “ಮುಸ್ಲಿಮ್ ಮತ್ತು ಕ್ರಿಶ್ಚಿಯನ್‌ ಸಮುದಾಯಗಳು ಮತಾಂತರದ ಗೀಳನ್ನು ಹೊಂದಿವೆ” ಎಂದು ಹೇಳಿದ್ದಾರೆ.

ಫೆಬ್ರವರಿ 2ರಂದು ಬಾರ್ಮರ್‌ನಲ್ಲಿ ನಡೆದ ಹಿಂದೂ ಮುಖಂಡರ ಸಭೆಯಲ್ಲಿ ರಾಮ್‌ದೇವ್ ಪಾಲ್ಗೊಂಡಿದ್ದರು. “ಹಿಂದೂ ಹುಡುಗಿಯರನ್ನು ಅಪಹರಿಸುತ್ತಾರೆ, ಭಯೋತ್ಪಾದನೆ ಮಾಡುತ್ತಾರೆ. ಈ ಎಲ್ಲಾ ಪಾಪಗಳನ್ನು ನಮಾಜ್ ತೊಳೆಯುತ್ತದೆ ಎಂದು ಮುಸ್ಲಿಮರು ನಂಬುತ್ತಾರೆ” ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ರಾಮದೇವ್‌, “ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸ್ಲಿಂನನ್ನು ಕೇಳಿ- ಐದು ಬಾರಿ ನಮಾಜ್ ಓದಿ ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ- ಎನ್ನುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸುತ್ತೀರಾ, ನಿಮಗೆ ಅನಿಸಿದ ಪಾಪವನ್ನು ಮಾಡಿರಿ. ಇಸ್ಲಾಮಿನ ಅರ್ಥ ಕೇವಲ ನಮಾಜ್ ಎಂದು ಅವರು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಮ್ಮ ಮುಸ್ಲಿಂ ಸಹೋದರರು ಬಹಳಷ್ಟು ಪಾಪಗಳನ್ನು ಮಾಡುತ್ತಾರೆ, ಆದರೆ ಅವರು ಖಂಡಿತವಾಗಿಯೂ ಪ್ರಾರ್ಥನೆ ಮಾಡುತ್ತಾರೆಂಬುದನ್ನು ನೋಡಿದ್ದೇನೆ. ಏಕೆಂದರೆ ಅವರಿಗೆ ಕಲಿಸಿರುವುದು ಅದನ್ನೇ, ಕೇವಲ ಪ್ರಾರ್ಥನೆ ಮಾಡಿ ಎಂಬುದಾಗಿದೆ. ಅವರು ಭಯೋತ್ಪಾದಕರಾಗುತ್ತಾರೆ, ಹೆಚ್ಚಿನವರು ಅಪರಾಧಿಗಳಾಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಇದನ್ನು ಇಸ್ಲಾಂ ಅಥವಾ ಕುರಾನ್ ಬೋಧಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ಹೀಗೆಯೇ ಅನುಸರಿಸಲಾಗುತ್ತಿದೆ” ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುತ್ತಾ, “ಕ್ರಿಶ್ಚಿಯಾನಿಟಿ ಏನು ಹೇಳುತ್ತದೆ? ಚರ್ಚ್‌ಗೆ ಹೋಗಿ, ಮೇಣದಬತ್ತಿಯನ್ನು ಬೆಳಗಿಸಿ, ತದನಂತರ ಕರ್ತನಾದ ಯೇಸುವಿನ ಮುಂದೆ ನಿಂತುಕೊಳ್ಳಿ. ನಿಮ್ಮ ಎಲ್ಲಾ ಪಾಪಗಳು ತೊಳೆಯಲ್ಪಡುತ್ತವೆ. ಕ್ರಿಶ್ಚಿಯನ್ನರು ತಮ್ಮ ಎದೆಯ ಮೇಲೆ ಶಿಲುಬೆಯನ್ನು ಧರಿಸುತ್ತಾರೆ ಮತ್ತು ಧರ್ಮವನ್ನು ಪ್ರಚಾರ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ನಾನು ಯಾರನ್ನೂ ಟೀಕಿಸುವುದಿಲ್ಲ. ಈ ಜನರು ಕೇವಲ ಗೀಳನ್ನು ಹೊಂದಿದ್ದಾರೆ. ಕೆಲವರು ಇಡೀ ಜಗತ್ತನ್ನು ಇಸ್ಲಾಂ ಆಗಿ ಪರಿವರ್ತಿಸಿ ಎಂದು ಹೇಳುತ್ತಾರೆ, ಇನ್ನು ಕೆಲವರು ಇಡೀ ಪ್ರಪಂಚವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಬೇಕು ಎಂದು ಹೇಳುತ್ತಾರೆ. ಆದರೆ ಮತಾಂತರದ ಮೂಲಕ ನೀವು ಏನು ಮಾಡುತ್ತೀರಿ ಎಂದರೆ, ಯಾವುದೇ ಅಜೆಂಡಾ ಇರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮಕ್ಕೆ ಹೋಲಿಸುತ್ತಾ, ಎರಡು ಧರ್ಮಗಳನ್ನು (ಇಸ್ಲಾಂ, ಕ್ರಿಶ್ಚಿಯನ್‌) ಅವಹೇಳನ ಮಾಡಿರುವ ಅವರು, “ಅಹಿಂಸೆ ಮತ್ತು ಪ್ರಾಮಾಣಿಕತೆಯನ್ನು ಕಲಿಸುತ್ತದೆ” ಎಂದು ಹಿಂದೂ ಧರ್ಮವನ್ನು ಹೊಗಳಿದ್ದಾರೆ. ವಿಪರ್ಯಾಸವೆಂದರೆ, ಕೇವಲ ಒಂದು ವಾರದ ಹಿಂದೆ, ಮುಂಬೈನಲ್ಲಿ ಮತ್ತೊಬ್ಬ ಹಿಂದುತ್ವ ಮುಖಂಡ ಮಾತನಾಡುತ್ತಾ, “ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು, ಮುಸ್ಲಿಮರಿಗೆ ಪಾಠ ಕಲಿಸಬೇಕು” ಎಂದು ಪ್ರಚೋದಿಸಿದ್ದರು.

ರಾಜಸ್ಥಾನ ಪೊಲೀಸರು ರಾಮದೇವ್‌ ಹೇಳಿಕೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿವೆ.

ರಾಮದೇವ್‌ ಹೇಳಿಕೆಯನ್ನು ಟೀಕಿಸಿರುವ ಎನ್‌ಜಿಒ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್, “ಈ ಭಾಷಣದ ಮೂಲಕ ರಾಮ್‌ದೇವ್ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹಿಂದೂ ಧರ್ಮವನ್ನು ಎಲ್ಲಕ್ಕಿಂತ ಉತ್ತಮ ಧರ್ಮವೆಂದು ಬಿಂಬಿಸುವ ಸಲುವಾಗಿ, ರಾಮ್‌ದೇವ್ ಪೂರ್ವಾಗ್ರಹ ಪೀಡಿತರಾಗಿದ್ದಾರೆ” ಎಂದಿದೆ.

ರಾಮದೇವ್ ಸಮಸ್ಯಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ, ಈ ಯೋಗೋದ್ಯಮಿಯು ಮಹಿಳೆಯರ ಸೀರೆಯ ಬಗ್ಗೆ ಮಾತನಾಡುತ್ತಾ, “ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದಿದ್ದರು. ಈ ಹೇಳಿಕೆಯ ಬಳಿಕ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಂಎಸ್‌ಸಿಡಬ್ಲ್ಯು) ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನಂತರ ಅವರು ಕ್ಷಮೆಯಾಚಿಸಿದ್ದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...