Homeಮುಖಪುಟಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಯೋಗೋದ್ಯಮಿ ಬಾಬಾ ರಾಮ್‌ದೇವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಈ ಬಾರಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಬಗ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿದೆ.

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಸಭೆಯೊಂದರಲ್ಲಿ ರಾಮ್‌ದೇವ್ ಅವರು ಮಾತನಾಡುತ್ತಾ, “ಮುಸ್ಲಿಮ್ ಮತ್ತು ಕ್ರಿಶ್ಚಿಯನ್‌ ಸಮುದಾಯಗಳು ಮತಾಂತರದ ಗೀಳನ್ನು ಹೊಂದಿವೆ” ಎಂದು ಹೇಳಿದ್ದಾರೆ.

ಫೆಬ್ರವರಿ 2ರಂದು ಬಾರ್ಮರ್‌ನಲ್ಲಿ ನಡೆದ ಹಿಂದೂ ಮುಖಂಡರ ಸಭೆಯಲ್ಲಿ ರಾಮ್‌ದೇವ್ ಪಾಲ್ಗೊಂಡಿದ್ದರು. “ಹಿಂದೂ ಹುಡುಗಿಯರನ್ನು ಅಪಹರಿಸುತ್ತಾರೆ, ಭಯೋತ್ಪಾದನೆ ಮಾಡುತ್ತಾರೆ. ಈ ಎಲ್ಲಾ ಪಾಪಗಳನ್ನು ನಮಾಜ್ ತೊಳೆಯುತ್ತದೆ ಎಂದು ಮುಸ್ಲಿಮರು ನಂಬುತ್ತಾರೆ” ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ರಾಮದೇವ್‌, “ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸ್ಲಿಂನನ್ನು ಕೇಳಿ- ಐದು ಬಾರಿ ನಮಾಜ್ ಓದಿ ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ- ಎನ್ನುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸುತ್ತೀರಾ, ನಿಮಗೆ ಅನಿಸಿದ ಪಾಪವನ್ನು ಮಾಡಿರಿ. ಇಸ್ಲಾಮಿನ ಅರ್ಥ ಕೇವಲ ನಮಾಜ್ ಎಂದು ಅವರು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಮ್ಮ ಮುಸ್ಲಿಂ ಸಹೋದರರು ಬಹಳಷ್ಟು ಪಾಪಗಳನ್ನು ಮಾಡುತ್ತಾರೆ, ಆದರೆ ಅವರು ಖಂಡಿತವಾಗಿಯೂ ಪ್ರಾರ್ಥನೆ ಮಾಡುತ್ತಾರೆಂಬುದನ್ನು ನೋಡಿದ್ದೇನೆ. ಏಕೆಂದರೆ ಅವರಿಗೆ ಕಲಿಸಿರುವುದು ಅದನ್ನೇ, ಕೇವಲ ಪ್ರಾರ್ಥನೆ ಮಾಡಿ ಎಂಬುದಾಗಿದೆ. ಅವರು ಭಯೋತ್ಪಾದಕರಾಗುತ್ತಾರೆ, ಹೆಚ್ಚಿನವರು ಅಪರಾಧಿಗಳಾಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಇದನ್ನು ಇಸ್ಲಾಂ ಅಥವಾ ಕುರಾನ್ ಬೋಧಿಸುತ್ತದೆ ಎಂದು ನಾನು ಹೇಳುತ್ತಿಲ್ಲ. ಆದರೆ ಹೀಗೆಯೇ ಅನುಸರಿಸಲಾಗುತ್ತಿದೆ” ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುತ್ತಾ, “ಕ್ರಿಶ್ಚಿಯಾನಿಟಿ ಏನು ಹೇಳುತ್ತದೆ? ಚರ್ಚ್‌ಗೆ ಹೋಗಿ, ಮೇಣದಬತ್ತಿಯನ್ನು ಬೆಳಗಿಸಿ, ತದನಂತರ ಕರ್ತನಾದ ಯೇಸುವಿನ ಮುಂದೆ ನಿಂತುಕೊಳ್ಳಿ. ನಿಮ್ಮ ಎಲ್ಲಾ ಪಾಪಗಳು ತೊಳೆಯಲ್ಪಡುತ್ತವೆ. ಕ್ರಿಶ್ಚಿಯನ್ನರು ತಮ್ಮ ಎದೆಯ ಮೇಲೆ ಶಿಲುಬೆಯನ್ನು ಧರಿಸುತ್ತಾರೆ ಮತ್ತು ಧರ್ಮವನ್ನು ಪ್ರಚಾರ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ನಾನು ಯಾರನ್ನೂ ಟೀಕಿಸುವುದಿಲ್ಲ. ಈ ಜನರು ಕೇವಲ ಗೀಳನ್ನು ಹೊಂದಿದ್ದಾರೆ. ಕೆಲವರು ಇಡೀ ಜಗತ್ತನ್ನು ಇಸ್ಲಾಂ ಆಗಿ ಪರಿವರ್ತಿಸಿ ಎಂದು ಹೇಳುತ್ತಾರೆ, ಇನ್ನು ಕೆಲವರು ಇಡೀ ಪ್ರಪಂಚವನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಬೇಕು ಎಂದು ಹೇಳುತ್ತಾರೆ. ಆದರೆ ಮತಾಂತರದ ಮೂಲಕ ನೀವು ಏನು ಮಾಡುತ್ತೀರಿ ಎಂದರೆ, ಯಾವುದೇ ಅಜೆಂಡಾ ಇರುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಧರ್ಮಕ್ಕೆ ಹೋಲಿಸುತ್ತಾ, ಎರಡು ಧರ್ಮಗಳನ್ನು (ಇಸ್ಲಾಂ, ಕ್ರಿಶ್ಚಿಯನ್‌) ಅವಹೇಳನ ಮಾಡಿರುವ ಅವರು, “ಅಹಿಂಸೆ ಮತ್ತು ಪ್ರಾಮಾಣಿಕತೆಯನ್ನು ಕಲಿಸುತ್ತದೆ” ಎಂದು ಹಿಂದೂ ಧರ್ಮವನ್ನು ಹೊಗಳಿದ್ದಾರೆ. ವಿಪರ್ಯಾಸವೆಂದರೆ, ಕೇವಲ ಒಂದು ವಾರದ ಹಿಂದೆ, ಮುಂಬೈನಲ್ಲಿ ಮತ್ತೊಬ್ಬ ಹಿಂದುತ್ವ ಮುಖಂಡ ಮಾತನಾಡುತ್ತಾ, “ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು, ಮುಸ್ಲಿಮರಿಗೆ ಪಾಠ ಕಲಿಸಬೇಕು” ಎಂದು ಪ್ರಚೋದಿಸಿದ್ದರು.

ರಾಜಸ್ಥಾನ ಪೊಲೀಸರು ರಾಮದೇವ್‌ ಹೇಳಿಕೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳಾಗಿವೆ.

ರಾಮದೇವ್‌ ಹೇಳಿಕೆಯನ್ನು ಟೀಕಿಸಿರುವ ಎನ್‌ಜಿಒ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್, “ಈ ಭಾಷಣದ ಮೂಲಕ ರಾಮ್‌ದೇವ್ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹಿಂದೂ ಧರ್ಮವನ್ನು ಎಲ್ಲಕ್ಕಿಂತ ಉತ್ತಮ ಧರ್ಮವೆಂದು ಬಿಂಬಿಸುವ ಸಲುವಾಗಿ, ರಾಮ್‌ದೇವ್ ಪೂರ್ವಾಗ್ರಹ ಪೀಡಿತರಾಗಿದ್ದಾರೆ” ಎಂದಿದೆ.

ರಾಮದೇವ್ ಸಮಸ್ಯಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್‌ನಲ್ಲಿ, ಈ ಯೋಗೋದ್ಯಮಿಯು ಮಹಿಳೆಯರ ಸೀರೆಯ ಬಗ್ಗೆ ಮಾತನಾಡುತ್ತಾ, “ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದಿದ್ದರು. ಈ ಹೇಳಿಕೆಯ ಬಳಿಕ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ (ಎಂಎಸ್‌ಸಿಡಬ್ಲ್ಯು) ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನಂತರ ಅವರು ಕ್ಷಮೆಯಾಚಿಸಿದ್ದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...