Homeಮುಖಪುಟಮಹಾರಾಷ್ಟ್ರ: ಈಡೇರದ ಮುಸ್ಲಿಮರ ಮೀಸಲಾತಿ ಬೇಡಿಕೆ

ಮಹಾರಾಷ್ಟ್ರ: ಈಡೇರದ ಮುಸ್ಲಿಮರ ಮೀಸಲಾತಿ ಬೇಡಿಕೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಶೇ 5ರಷ್ಟು ಮೀಸಲಾತಿ ನೀಡಬೇಕೆಂದು ಮುಸ್ಲಿಂ ಸಮುದಾಯ ಹಲವು ವರ್ಷಗಳಿಂದ ಬೇಡಿಕೆಗಳನ್ನು ಮುಂದಿಡುತ್ತಲೇ ಬರುತ್ತಿದೆ. ಈ ಕುರಿತು ನ್ಯಾಯಾಲಯವು ಅನುಮೋದಿಸಿದರೂ ಸರಕಾರ ಆದೇಶದ ಪಾಲನೆಗೆ ಉತ್ಸುಕತೆಯನ್ನು ತೋರಿಸಿಲ್ಲ. ಇದರಿಂದಾಗಿ ಮರಾಠರು, ಧಂಗರ್ ಸಮುದಾಯದ ಜನರ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಮುಸ್ಲಿಂ ಸಮುದಾಯವು ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ.

ಮೀಸಲಾತಿ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮುಸ್ಲಿಮರು ಕೂಡ ಮರಾಠರು ಮತ್ತು ಧಂಗಾರ್‌ಗಳಂತೆ ಬೀದಿಗೆ ಬರಬೇಕಾಗುತ್ತದೆ ಎಂದು ಸಮುದಾಯದ ಮುಖಂಡರು ಮಹರಾಷ್ಟ್ರ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಪುಣೆಯಲ್ಲಿ ನಡೆದ ಅಖಿಲ ಭಾರತ ಉಲೇಮಾ ಮಂಡಳಿಯ  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಸ್ಲಿಂ ಸಮುದಾಯವು  ಶಿಕ್ಷಣದಲ್ಲಿ 5% ಮೀಸಲಾತಿ ಕುರಿತ ತಮ್ಮ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ರಾಜ್ಯದ ಉರ್ದು ಶಾಲೆಗಳಲ್ಲಿ ಅರೇಬಿಕ್ ಭಾಷೆಯನ್ನು ಕಡ್ಡಾಯವಾಗಿ ಕಲಿಸುವಂತೆ ಒತ್ತಾಯಿಸಿದೆ.

ನಾವು ಹಲವಾರು ವಿಷಯಗಳನ್ನು ಚರ್ಚಿಸಿದ್ದೇವೆ ಮತ್ತು ಅದನ್ನು ಪರಿಹರಿಸಲು ಸರ್ಕಾರಕ್ಕೆ ಔಪಚಾರಿಕ ಮನವಿಯನ್ನು ಮಾಡಿದ್ದೇವೆ. ನಾವು ಗೆಲ್ಲಲು ಸಾಧ್ಯವಾಗದಿರಬಹುದು. ಆದರೆ ಖಂಡಿತವಾಗಿಯೂ  ಯಾರನ್ನಾದರೂ ಸೋಲಿಸಬಹುದು. ಇದಕ್ಕೆ ಸಮಯ ಬಂದಿದೆ. ಮುಸ್ಲಿಮ್ ಸಮುದಾಯದ ಅಗತ್ಯಗಳ ವಿಚಾರದಲ್ಲಿ ನಾವು ಕಣ್ಣು ಮುಚ್ಚಿಕೊಂಡು ಇರಲು ಸಾಧ್ಯವಿಲ್ಲ ಎಂದು ಎಐಯುಬಿಯ ವಕ್ಫ್ ವಿಭಾಗದ ಮುಖ್ಯಸ್ಥ ಸಲೀಮ್ ಸಾರಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಚರ್ಚಿಸಲು ನಾವು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ,  ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ  ಅಪಾಯಿಂಟ್‌ಮೆಂಟ್ ಕೇಳಿದ್ದೇವೆ. ಇದುವರೆಗೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಶಿಕ್ಷಣದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಬುದ್ಧಿಜೀವಿಗಳು, ಧಾರ್ಮಿಕ ವಿದ್ವಾಂಸರು, ಸಮುದಾಯದ ಮುಖಂಡರು ಮತ್ತು ರಾಜಕಾರಣಿಗಳು ಪಕ್ಷದ ರೇಖೆಗಳನ್ನು ಮೀರಿ ಮಾತನಾಡುತ್ತಿದ್ದಾರೆ. ನಾನು ಈ ಮೀಸಲಾತಿ ಸಮಸ್ಯೆಗಳ ಬಗ್ಗೆ ಬೇರೆ-ಬೇರೆ ಪಕ್ಷದ ನಾಯಕರ ಜೊತೆ ಮಾತನಾಡುತ್ತಿದ್ದೇನೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಶಿಕ್ಷಣದಲ್ಲಿ 5% ಮೀಸಲಾತಿಯನ್ನು ನ್ಯಾಯಾಲಯವು ಅನುಮೋದಿಸಿದರೂ, ಇಲ್ಲಿಯವರೆಗೆ ಯಾವುದೇ ಸರ್ಕಾರ ಅದನ್ನು ಜಾರಿಗೆ ತರಲು ಉತ್ಸುಕತೆ ತೋರುತ್ತಿಲ್ಲ ಎಂದು ಸಾರಂಗ್ ಆರೋಪಿಸಿದ್ದಾರೆ.

ಇಂದು ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಗಳನ್ನು ಪಡೆಯಲು ಅರೇಬಿಕ್ ಭಾಷೆಯ ಜ್ಞಾನವು ಹೆಚ್ಚುವರಿ ಅರ್ಹತೆಯಾಗಿದೆ. ಇಲ್ಲಿ ಜನರು ಮದರಸಾಗಳ ವಿರುದ್ಧ ಮಾತನಾಡುತ್ತಾರೆ. ಆದರೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಅರೇಬಿಕ್ ಭಾಷೆ ಸೇರಿದಂತೆ ಹಲವು ವಿಷಯಗಳನ್ನು ಕಲಿಯಲು ಇಲ್ಲಿಗೆ ಹೋಗುವುದನ್ನು ಸ್ಮರಿಸಬಹುದಾಗಿದೆ.  ರಾಜ್ಯದ ಎಲ್ಲಾ ಉರ್ದು ಶಾಲೆಗಳಲ್ಲಿ ಅರೇಬಿಕ್ ಭಾಷೆಯನ್ನು ಒಂದು ವಿಷಯವಾಗಿ ಕಲಿಸಬೇಕು ಎಂದು ಸಲೀಮ್ ಸಾರಂಗ್‌ ಆಗ್ರಹಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...