Homeಮುಖಪುಟಮಹಾರಾಷ್ಟ್ರ: ಈಡೇರದ ಮುಸ್ಲಿಮರ ಮೀಸಲಾತಿ ಬೇಡಿಕೆ

ಮಹಾರಾಷ್ಟ್ರ: ಈಡೇರದ ಮುಸ್ಲಿಮರ ಮೀಸಲಾತಿ ಬೇಡಿಕೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಶೇ 5ರಷ್ಟು ಮೀಸಲಾತಿ ನೀಡಬೇಕೆಂದು ಮುಸ್ಲಿಂ ಸಮುದಾಯ ಹಲವು ವರ್ಷಗಳಿಂದ ಬೇಡಿಕೆಗಳನ್ನು ಮುಂದಿಡುತ್ತಲೇ ಬರುತ್ತಿದೆ. ಈ ಕುರಿತು ನ್ಯಾಯಾಲಯವು ಅನುಮೋದಿಸಿದರೂ ಸರಕಾರ ಆದೇಶದ ಪಾಲನೆಗೆ ಉತ್ಸುಕತೆಯನ್ನು ತೋರಿಸಿಲ್ಲ. ಇದರಿಂದಾಗಿ ಮರಾಠರು, ಧಂಗರ್ ಸಮುದಾಯದ ಜನರ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಮುಸ್ಲಿಂ ಸಮುದಾಯವು ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ.

ಮೀಸಲಾತಿ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮುಸ್ಲಿಮರು ಕೂಡ ಮರಾಠರು ಮತ್ತು ಧಂಗಾರ್‌ಗಳಂತೆ ಬೀದಿಗೆ ಬರಬೇಕಾಗುತ್ತದೆ ಎಂದು ಸಮುದಾಯದ ಮುಖಂಡರು ಮಹರಾಷ್ಟ್ರ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಪುಣೆಯಲ್ಲಿ ನಡೆದ ಅಖಿಲ ಭಾರತ ಉಲೇಮಾ ಮಂಡಳಿಯ  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಸ್ಲಿಂ ಸಮುದಾಯವು  ಶಿಕ್ಷಣದಲ್ಲಿ 5% ಮೀಸಲಾತಿ ಕುರಿತ ತಮ್ಮ ಬೇಡಿಕೆಯನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ರಾಜ್ಯದ ಉರ್ದು ಶಾಲೆಗಳಲ್ಲಿ ಅರೇಬಿಕ್ ಭಾಷೆಯನ್ನು ಕಡ್ಡಾಯವಾಗಿ ಕಲಿಸುವಂತೆ ಒತ್ತಾಯಿಸಿದೆ.

ನಾವು ಹಲವಾರು ವಿಷಯಗಳನ್ನು ಚರ್ಚಿಸಿದ್ದೇವೆ ಮತ್ತು ಅದನ್ನು ಪರಿಹರಿಸಲು ಸರ್ಕಾರಕ್ಕೆ ಔಪಚಾರಿಕ ಮನವಿಯನ್ನು ಮಾಡಿದ್ದೇವೆ. ನಾವು ಗೆಲ್ಲಲು ಸಾಧ್ಯವಾಗದಿರಬಹುದು. ಆದರೆ ಖಂಡಿತವಾಗಿಯೂ  ಯಾರನ್ನಾದರೂ ಸೋಲಿಸಬಹುದು. ಇದಕ್ಕೆ ಸಮಯ ಬಂದಿದೆ. ಮುಸ್ಲಿಮ್ ಸಮುದಾಯದ ಅಗತ್ಯಗಳ ವಿಚಾರದಲ್ಲಿ ನಾವು ಕಣ್ಣು ಮುಚ್ಚಿಕೊಂಡು ಇರಲು ಸಾಧ್ಯವಿಲ್ಲ ಎಂದು ಎಐಯುಬಿಯ ವಕ್ಫ್ ವಿಭಾಗದ ಮುಖ್ಯಸ್ಥ ಸಲೀಮ್ ಸಾರಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಚರ್ಚಿಸಲು ನಾವು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ,  ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ  ಅಪಾಯಿಂಟ್‌ಮೆಂಟ್ ಕೇಳಿದ್ದೇವೆ. ಇದುವರೆಗೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಶಿಕ್ಷಣದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಬುದ್ಧಿಜೀವಿಗಳು, ಧಾರ್ಮಿಕ ವಿದ್ವಾಂಸರು, ಸಮುದಾಯದ ಮುಖಂಡರು ಮತ್ತು ರಾಜಕಾರಣಿಗಳು ಪಕ್ಷದ ರೇಖೆಗಳನ್ನು ಮೀರಿ ಮಾತನಾಡುತ್ತಿದ್ದಾರೆ. ನಾನು ಈ ಮೀಸಲಾತಿ ಸಮಸ್ಯೆಗಳ ಬಗ್ಗೆ ಬೇರೆ-ಬೇರೆ ಪಕ್ಷದ ನಾಯಕರ ಜೊತೆ ಮಾತನಾಡುತ್ತಿದ್ದೇನೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಶಿಕ್ಷಣದಲ್ಲಿ 5% ಮೀಸಲಾತಿಯನ್ನು ನ್ಯಾಯಾಲಯವು ಅನುಮೋದಿಸಿದರೂ, ಇಲ್ಲಿಯವರೆಗೆ ಯಾವುದೇ ಸರ್ಕಾರ ಅದನ್ನು ಜಾರಿಗೆ ತರಲು ಉತ್ಸುಕತೆ ತೋರುತ್ತಿಲ್ಲ ಎಂದು ಸಾರಂಗ್ ಆರೋಪಿಸಿದ್ದಾರೆ.

ಇಂದು ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಗಳನ್ನು ಪಡೆಯಲು ಅರೇಬಿಕ್ ಭಾಷೆಯ ಜ್ಞಾನವು ಹೆಚ್ಚುವರಿ ಅರ್ಹತೆಯಾಗಿದೆ. ಇಲ್ಲಿ ಜನರು ಮದರಸಾಗಳ ವಿರುದ್ಧ ಮಾತನಾಡುತ್ತಾರೆ. ಆದರೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಅರೇಬಿಕ್ ಭಾಷೆ ಸೇರಿದಂತೆ ಹಲವು ವಿಷಯಗಳನ್ನು ಕಲಿಯಲು ಇಲ್ಲಿಗೆ ಹೋಗುವುದನ್ನು ಸ್ಮರಿಸಬಹುದಾಗಿದೆ.  ರಾಜ್ಯದ ಎಲ್ಲಾ ಉರ್ದು ಶಾಲೆಗಳಲ್ಲಿ ಅರೇಬಿಕ್ ಭಾಷೆಯನ್ನು ಒಂದು ವಿಷಯವಾಗಿ ಕಲಿಸಬೇಕು ಎಂದು ಸಲೀಮ್ ಸಾರಂಗ್‌ ಆಗ್ರಹಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...