Homeಮುಖಪುಟಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು - ಹಣ್ಣು ತಿನ್ನಿಸಿ ಇಫ್ತಾರ್...

ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲ ಭಕ್ತರು

ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ.

- Advertisement -
- Advertisement -

ರಾಜ್ಯದ ಕೆಲವೆಡೆ ಒಂದು ಕೋಮಿನ ಜನರಿಗೆ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಬ್ಯಾನರ್ ಹಾಕಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆದಿತ್ತು. ಅದರ ಬೆನ್ನಿಗೆ ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಶ್ರೀರಾಮಸೇನೆಯ ದುಷ್ಕರ್ಮಿಗಳು ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದಿದ್ದರು. ಈ ಘಟನೆಗಳನ್ನು ನಾಡಿನ ಪ್ರಜ್ಞಾವಂತರು, ಜೀವಪರರೆಲ್ಲರೂ ಖಂಡಿಸಿದ್ದರು. ಈ ಘಟನೆಗಳಿಂದ ನೊಂದ ಬಳ್ಳಾರಿಯ ಗ್ರಾಮವೊಂದರ ಹಿಂದೂ-ಮುಸಲ್ಮಾನ ಗ್ರಾಮಸ್ಥರು ನಾವು ಮತ್ತಷ್ಟು ಒಗ್ಗಟ್ಟಾಗಿದ್ದೇವೆ ಎಂಬ ಸೌಹಾರ್ದ ಸಂದೇಶ ಸಾರಿದ್ದಾರೆ. ಆ ಮೂಲಕ ಒಡೆದು ಆಳುವವರಿಗೆ ಬಂಧುತ್ವದ ಪಾಠ ಹೇಳಲು ಹೊರಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಪ್ರತಿವರ್ಷ ರಾಮನವಮಿಯ ಅಂಗವಾಗಿ ಹಿಂದೂ ಯುವಕರು ರಾಮ ಮಾಲೆ ಹಾಕಿಕೊಂಡು ವ್ರತ ಆಚರಿಸುತ್ತಾರೆ. ಅದೇ ಊರಿನಲ್ಲಿನ ಮುಸ್ಲಿಮರು ರಂಜಾನ್ ಮಾಸದಲ್ಲಿ ಉಪವಾಸವಿದ್ದು ಸಂಜೆ ಪ್ರಾರ್ಥನೆ ಬಳಿಕ ಇಫ್ತಾರ್ ಆಚರಿಸುತ್ತಾರೆ. ಇದನ್ನು ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಮಾಡಿಕೊಂಡು ಬರುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದಲ್ಲಿನ ಅಶಾಂತ ವಾತವರಣ ಗಮನಿಸಿದ ಊರಿನ ಗ್ರಾಮಸ್ಥರು ಒಟ್ಟಾಗಿ ಸೇರಿ ರಾಮನವಮಿ ಮತ್ತು ಇಫ್ತಾರ್ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಏಪ್ರಿಲ್ 09ರ ಕಳೆದ ಶನಿವಾರದಂದು ರಾಮನವಮಿ ಹಬ್ಬದ ಪ್ರಯುಕ್ತ ಮೆರವಣಿಗೆ ಹೊರಟಿದ್ದ ರಾಮ ಭಕ್ತರನ್ನು ಮುಸ್ಲಿಂ ಬಾಂಧವರು ಅಪ್ಪಿಕೊಂಡು, ಅವರಿಗೆ ಕೇಸರಿ ಶಾಲನ್ನು ಹಾಕುವುದರ ಮೂಲಕ ರಾಮನವಮಿಯ ಶುಭಾಶಯಗಳನ್ನು ತಿಳಿಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗಿ ತಾವು ಹಬ್ಬದಲ್ಲಿ ಭಾಗಿಯಾಗಿದ್ದರು.

ಅದಕ್ಕೆ ಪ್ರತಿಯಾಗಿ ಏಪ್ರಿಲ್ 12ರ ಮಂಗಳವಾರದಂದು ಮುಸ್ಲಿಮರು ಸಂಜೆ ಪ್ರಾರ್ಥನೆ ಮುಗಿಸಿದ ಸಮಯದಲ್ಲಿ ರಾಮ ಮಾಲೆ ಹಾಕಿಕೊಂಡಿರುವ ಹಲವು ಭಕ್ತರು ಮಸೀದಿಗೆ ಭೇಟಿ ಕೊಟ್ಟು ಸಿಹಿ, ಹಣ್ಣು ಹಂಪಲುಗಳನ್ನು ಹಂಚಿ ಇಫ್ತಾರ್‌ ಆಚರಿಸುವ ಮೂಲಕ ಕೃತಜ್ಞತೆ ತಿಳಿಸಿದ್ದಾರೆ. ಪರಸ್ಪರ ಹಣ್ಣು ತಿನಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸೌಹಾರ್ದತೆಯನ್ನು ಸಾರುತ್ತಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರಾಮಸಾಗರ ಗ್ರಾಮದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯ ಭುವನ್ ಕುಮಾರ್, “ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಈ ಹಿಂದೆ ರಾಮಭಕ್ತರು ತಮ್ಮ ಪಾಡಿಗೆ ತಾವು ರಾಮನವಮಿ ಆಚರಿಸುತ್ತಿದ್ದಾಗ ಮುಸ್ಲಿಮರು ಶುಭ ಹಾರೈಸುತ್ತಿದ್ದರು. ಆದರೆ ಈ ಬಾರಿ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ಆಲಂಗಿಸಿ ಕೇಸರಿ ಶಾಲು ಹಾಕಿದ್ದಾರೆ. ಅದೇ ರೀತಿ ಹಿಂದೂ ಯುವಕರು ಸಹ ಮಸೀದಿಗೆ ತೆರಳಿ ಹಣ್ಣು-ಸಿಹಿ ತಿನಿಸಿ ಇಫ್ತಾರ್ ಆಚರಿಸಿದ್ದಾರೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ಇಡೀ ಭಾರತ ಇರಬೇಕಾದ್ದು ಹೀಗೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....