Homeಮುಖಪುಟಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು - ಹಣ್ಣು ತಿನ್ನಿಸಿ ಇಫ್ತಾರ್...

ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲ ಭಕ್ತರು

ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ.

- Advertisement -
- Advertisement -

ರಾಜ್ಯದ ಕೆಲವೆಡೆ ಒಂದು ಕೋಮಿನ ಜನರಿಗೆ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಬ್ಯಾನರ್ ಹಾಕಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆದಿತ್ತು. ಅದರ ಬೆನ್ನಿಗೆ ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಶ್ರೀರಾಮಸೇನೆಯ ದುಷ್ಕರ್ಮಿಗಳು ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದಿದ್ದರು. ಈ ಘಟನೆಗಳನ್ನು ನಾಡಿನ ಪ್ರಜ್ಞಾವಂತರು, ಜೀವಪರರೆಲ್ಲರೂ ಖಂಡಿಸಿದ್ದರು. ಈ ಘಟನೆಗಳಿಂದ ನೊಂದ ಬಳ್ಳಾರಿಯ ಗ್ರಾಮವೊಂದರ ಹಿಂದೂ-ಮುಸಲ್ಮಾನ ಗ್ರಾಮಸ್ಥರು ನಾವು ಮತ್ತಷ್ಟು ಒಗ್ಗಟ್ಟಾಗಿದ್ದೇವೆ ಎಂಬ ಸೌಹಾರ್ದ ಸಂದೇಶ ಸಾರಿದ್ದಾರೆ. ಆ ಮೂಲಕ ಒಡೆದು ಆಳುವವರಿಗೆ ಬಂಧುತ್ವದ ಪಾಠ ಹೇಳಲು ಹೊರಟಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಪ್ರತಿವರ್ಷ ರಾಮನವಮಿಯ ಅಂಗವಾಗಿ ಹಿಂದೂ ಯುವಕರು ರಾಮ ಮಾಲೆ ಹಾಕಿಕೊಂಡು ವ್ರತ ಆಚರಿಸುತ್ತಾರೆ. ಅದೇ ಊರಿನಲ್ಲಿನ ಮುಸ್ಲಿಮರು ರಂಜಾನ್ ಮಾಸದಲ್ಲಿ ಉಪವಾಸವಿದ್ದು ಸಂಜೆ ಪ್ರಾರ್ಥನೆ ಬಳಿಕ ಇಫ್ತಾರ್ ಆಚರಿಸುತ್ತಾರೆ. ಇದನ್ನು ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಮಾಡಿಕೊಂಡು ಬರುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದಲ್ಲಿನ ಅಶಾಂತ ವಾತವರಣ ಗಮನಿಸಿದ ಊರಿನ ಗ್ರಾಮಸ್ಥರು ಒಟ್ಟಾಗಿ ಸೇರಿ ರಾಮನವಮಿ ಮತ್ತು ಇಫ್ತಾರ್ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಏಪ್ರಿಲ್ 09ರ ಕಳೆದ ಶನಿವಾರದಂದು ರಾಮನವಮಿ ಹಬ್ಬದ ಪ್ರಯುಕ್ತ ಮೆರವಣಿಗೆ ಹೊರಟಿದ್ದ ರಾಮ ಭಕ್ತರನ್ನು ಮುಸ್ಲಿಂ ಬಾಂಧವರು ಅಪ್ಪಿಕೊಂಡು, ಅವರಿಗೆ ಕೇಸರಿ ಶಾಲನ್ನು ಹಾಕುವುದರ ಮೂಲಕ ರಾಮನವಮಿಯ ಶುಭಾಶಯಗಳನ್ನು ತಿಳಿಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗಿ ತಾವು ಹಬ್ಬದಲ್ಲಿ ಭಾಗಿಯಾಗಿದ್ದರು.

ಅದಕ್ಕೆ ಪ್ರತಿಯಾಗಿ ಏಪ್ರಿಲ್ 12ರ ಮಂಗಳವಾರದಂದು ಮುಸ್ಲಿಮರು ಸಂಜೆ ಪ್ರಾರ್ಥನೆ ಮುಗಿಸಿದ ಸಮಯದಲ್ಲಿ ರಾಮ ಮಾಲೆ ಹಾಕಿಕೊಂಡಿರುವ ಹಲವು ಭಕ್ತರು ಮಸೀದಿಗೆ ಭೇಟಿ ಕೊಟ್ಟು ಸಿಹಿ, ಹಣ್ಣು ಹಂಪಲುಗಳನ್ನು ಹಂಚಿ ಇಫ್ತಾರ್‌ ಆಚರಿಸುವ ಮೂಲಕ ಕೃತಜ್ಞತೆ ತಿಳಿಸಿದ್ದಾರೆ. ಪರಸ್ಪರ ಹಣ್ಣು ತಿನಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸೌಹಾರ್ದತೆಯನ್ನು ಸಾರುತ್ತಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರಾಮಸಾಗರ ಗ್ರಾಮದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯ ಭುವನ್ ಕುಮಾರ್, “ನಮ್ಮ ಗ್ರಾಮದಲ್ಲಿ ಹಿಂದಿನಿಂದಲೂ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆಯಿಂದ ಬದುಕಿದ್ದೇವೆ. ಈ ಹಿಂದೆ ರಾಮಭಕ್ತರು ತಮ್ಮ ಪಾಡಿಗೆ ತಾವು ರಾಮನವಮಿ ಆಚರಿಸುತ್ತಿದ್ದಾಗ ಮುಸ್ಲಿಮರು ಶುಭ ಹಾರೈಸುತ್ತಿದ್ದರು. ಆದರೆ ಈ ಬಾರಿ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಅವರನ್ನು ಆಲಂಗಿಸಿ ಕೇಸರಿ ಶಾಲು ಹಾಕಿದ್ದಾರೆ. ಅದೇ ರೀತಿ ಹಿಂದೂ ಯುವಕರು ಸಹ ಮಸೀದಿಗೆ ತೆರಳಿ ಹಣ್ಣು-ಸಿಹಿ ತಿನಿಸಿ ಇಫ್ತಾರ್ ಆಚರಿಸಿದ್ದಾರೆ. ಹಾಗಾಗಿ ನಮ್ಮ ಊರಿನ ಜನರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ಇಡೀ ಭಾರತ ಇರಬೇಕಾದ್ದು ಹೀಗೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...