Homeಮುಖಪುಟಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

- Advertisement -
- Advertisement -

‘ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು’ ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು.

ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ ‘ಅಖಿಲ ಭಾರತ ಕೋಮು ಸಾಮರಸ್ಯ ಸಂಯೋಜಕರ ಸಭೆ’ ಎಂಬ ಎರಡು ದಿನಗಳ ಕಾರ್ಯಕ್ರಮದಲ್ಲಿ ಹುಸೈನಿ ಮಾತನಾಡಿದರು. ದೇಶದಾದ್ಯಂತ ಸುಮಾರು 20 ರಾಜ್ಯಗಳಿಂದ ಕೋಮು ಸಾಮರಸ್ಯಕ್ಕಾಗಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿನ ಕೋಮು ಸಾಮರಸ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು, ಇಲ್ಲಿಯವರೆಗೆ ನಡೆಸಲಾದ ಕೆಲಸವನ್ನು ಪರಿಶೀಲಿಸುವುದು ಮತ್ತು ಭವಿಷ್ಯದ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡುವುದು ಸಭೆಯ ಉದ್ದೇಶವಾಗಿತ್ತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋಮು ಸಾಮರಸ್ಯಕ್ಕಾಗಿ ನಾವು ಮಾಡುವ ಕೆಲಸವು ತಾತ್ಕಾಲಿಕವಲ್ಲ. ಆದರೆ, ಶಾಶ್ವತ ಸ್ವರೂಪದ್ದಾಗಿದೆ ಎಂದು ಜಮಾಅತ್ ಮುಖ್ಯಸ್ಥರು ಹೇಳಿದರು. “ಇಸ್ಲಾಂ, ಜನರ ನಡುವಿನ ಸಂಬಂಧಗಳನ್ನು ಸರಿಪಡಿಸುವುದು ಮತ್ತು ಅವರನ್ನು ಸರಿಯಾದ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡುವುದರ ಮೇಲೆ ಸ್ಥಾಪಿತವಾಗಿದೆ. ಕುರಾನ್ ಇದಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಪ್ರವಾದಿ ಮುಹಮ್ಮದ್ ತಮ್ಮ ಇಡೀ ಜೀವನವನ್ನು ಈ ಕಾರಣಕ್ಕಾಗಿ ಮುಡಿಪಾಗಿಟ್ಟರು” ಎಂದು ಅವರು ಹೇಳಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಟಿ. ಆರಿಫ್ ಅಲಿ ಮಾತನಾಡಿ, “ಕೋಮು ಸಾಮರಸ್ಯಕ್ಕಾಗಿ ಪ್ರಯತ್ನಗಳು ಸನ್ನಿವೇಶದ ಒತ್ತಡಕ್ಕೆ ಪ್ರತಿಕ್ರಿಯೆಯಲ್ಲ, ಬದಲಾಗಿ ಜವಾಬ್ದಾರಿಯಾಗಿದೆ. ನಮ್ಮ ಒfರಯತ್ನಗಳು ಯಾವಾಗಲೂ ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ನೀತಿಯ ಭಾಗವಾಗಿದೆ. ದೇವರ ಸೃಷ್ಟಿಯ ಪ್ರತಿಯೊಂದು ಅಂಶದಲ್ಲೂ ಸಾಮರಸ್ಯ ಇರುವಂತೆಯೇ, ಮಾನವರ ನಡುವೆ ಸಾಮರಸ್ಯವೂ ಅತ್ಯಗತ್ಯ” ಎಂದು ಅವರು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ, ಸ್ವಾಮಿ ಸರ್ವಲೋಕ್ ಆನಂದ್ ಜಿ ಮಹಾರಾಜ್ ಅವರು ಕೋಮು ಸಾಮರಸ್ಯಕ್ಕಾಗಿ ಅಂತರಧರ್ಮೀಯ ಸಂವಾದದ ಮಹತ್ವದ ಕುರಿತು ಮಾತನಾಡಿದರು. “ಜನರು ತಮ್ಮ ಸ್ವಂತ ನಂಬಿಕೆಗಳನ್ನು ಮತ್ತು ಇತರರ ನಂಬಿಕೆಗಳನ್ನು ಅರ್ಥಮಾಡಿಕೊಂಡು ಗೌರವಿಸಬೇಕು” ಎಂದರು.

ಗ್ಯಾನಿ ಮಂಗಲ್ ಸಿಂಗ್ ಅವರು, ಎಲ್ಲಾ ಸಮುದಾಯಗಳ ನಡುವೆ ಸೇತುವೆಗಳನ್ನು ನಿರ್ಮಿಸುವ ಮಹತ್ವದ ಕುರಿತು ಮಾತನಾಡಿದರು. ಜನರಿಗೆ ನಿಸ್ವಾರ್ಥ ಸೇವೆಯು ಇದನ್ನು ಸಾಧಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಹೇಳಿದರು.

ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಕಾರ್ಯದರ್ಶಿ ಶೈಸ್ತಾ ರಿಫತ್ ಅವರು ‘ಕೋಮು ಸಾಮರಸ್ಯದಲ್ಲಿ ಮಹಿಳೆಯರ ಪಾತ್ರ’ದ ಕುರಿತು ಮಾತನಾಡಿದರು. “ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರನ್ನು (ಮಹಿಳೆಯರು) ಈ ಪ್ರಯತ್ನದಿಂದ ಹೊರಗಿಡಲು ಸಾಧ್ಯವಿಲ್ಲ. ಮಹಿಳೆಯರು ಮುಂದೆ ಬಂದು ಸಕ್ರಿಯ ಪಾತ್ರ ವಹಿಸಬೇಕು. ಈ ನಿಟ್ಟಿನಲ್ಲಿ ಸಮಾಜ ಮತ್ತು ರಾಷ್ಟ್ರವು ಅವರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಬೇಕು” ಎಂದು ಅವರು ಹೇಳಿದರು.

ಕಾರ್ಯಕ್ರಮದ ಸಮಯದಲ್ಲಿ, ಧರಮಿಕ್ ಜನ ಮೋರ್ಚಾ ಮತ್ತು ಸದ್ಭಾವನಾ ಮಂಚ್ ಅನ್ನು ದೇಶಾದ್ಯಂತ ಹೆಚ್ಚು ಸಕ್ರಿಯ ಮತ್ತು ಪರಿಣಾಮಕಾರಿಯಾಗಿಸಲು ವಿವಿಧ ವಿಚಾರಗಳ ಕುರಿತು ಭಾಗವಹಿಸುವವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜಮಾತೆ-ಇ-ಇಸ್ಲಾಮಿ ಹಿಂದ್‌ನ ಉಪಾಧ್ಯಕ್ಷ ಪ್ರೊ. ಸಲೀಂ ಎಂಜಿನಿಯರ್, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಮತ್ತು ತಾರತಮ್ಯವಿಲ್ಲದೆ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...