Homeಮುಖಪುಟಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

- Advertisement -
- Advertisement -

‘ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು’ ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು.

ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ ‘ಅಖಿಲ ಭಾರತ ಕೋಮು ಸಾಮರಸ್ಯ ಸಂಯೋಜಕರ ಸಭೆ’ ಎಂಬ ಎರಡು ದಿನಗಳ ಕಾರ್ಯಕ್ರಮದಲ್ಲಿ ಹುಸೈನಿ ಮಾತನಾಡಿದರು. ದೇಶದಾದ್ಯಂತ ಸುಮಾರು 20 ರಾಜ್ಯಗಳಿಂದ ಕೋಮು ಸಾಮರಸ್ಯಕ್ಕಾಗಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿನ ಕೋಮು ಸಾಮರಸ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು, ಇಲ್ಲಿಯವರೆಗೆ ನಡೆಸಲಾದ ಕೆಲಸವನ್ನು ಪರಿಶೀಲಿಸುವುದು ಮತ್ತು ಭವಿಷ್ಯದ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡುವುದು ಸಭೆಯ ಉದ್ದೇಶವಾಗಿತ್ತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋಮು ಸಾಮರಸ್ಯಕ್ಕಾಗಿ ನಾವು ಮಾಡುವ ಕೆಲಸವು ತಾತ್ಕಾಲಿಕವಲ್ಲ. ಆದರೆ, ಶಾಶ್ವತ ಸ್ವರೂಪದ್ದಾಗಿದೆ ಎಂದು ಜಮಾಅತ್ ಮುಖ್ಯಸ್ಥರು ಹೇಳಿದರು. “ಇಸ್ಲಾಂ, ಜನರ ನಡುವಿನ ಸಂಬಂಧಗಳನ್ನು ಸರಿಪಡಿಸುವುದು ಮತ್ತು ಅವರನ್ನು ಸರಿಯಾದ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡುವುದರ ಮೇಲೆ ಸ್ಥಾಪಿತವಾಗಿದೆ. ಕುರಾನ್ ಇದಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಪ್ರವಾದಿ ಮುಹಮ್ಮದ್ ತಮ್ಮ ಇಡೀ ಜೀವನವನ್ನು ಈ ಕಾರಣಕ್ಕಾಗಿ ಮುಡಿಪಾಗಿಟ್ಟರು” ಎಂದು ಅವರು ಹೇಳಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಟಿ. ಆರಿಫ್ ಅಲಿ ಮಾತನಾಡಿ, “ಕೋಮು ಸಾಮರಸ್ಯಕ್ಕಾಗಿ ಪ್ರಯತ್ನಗಳು ಸನ್ನಿವೇಶದ ಒತ್ತಡಕ್ಕೆ ಪ್ರತಿಕ್ರಿಯೆಯಲ್ಲ, ಬದಲಾಗಿ ಜವಾಬ್ದಾರಿಯಾಗಿದೆ. ನಮ್ಮ ಒfರಯತ್ನಗಳು ಯಾವಾಗಲೂ ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ನೀತಿಯ ಭಾಗವಾಗಿದೆ. ದೇವರ ಸೃಷ್ಟಿಯ ಪ್ರತಿಯೊಂದು ಅಂಶದಲ್ಲೂ ಸಾಮರಸ್ಯ ಇರುವಂತೆಯೇ, ಮಾನವರ ನಡುವೆ ಸಾಮರಸ್ಯವೂ ಅತ್ಯಗತ್ಯ” ಎಂದು ಅವರು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ, ಸ್ವಾಮಿ ಸರ್ವಲೋಕ್ ಆನಂದ್ ಜಿ ಮಹಾರಾಜ್ ಅವರು ಕೋಮು ಸಾಮರಸ್ಯಕ್ಕಾಗಿ ಅಂತರಧರ್ಮೀಯ ಸಂವಾದದ ಮಹತ್ವದ ಕುರಿತು ಮಾತನಾಡಿದರು. “ಜನರು ತಮ್ಮ ಸ್ವಂತ ನಂಬಿಕೆಗಳನ್ನು ಮತ್ತು ಇತರರ ನಂಬಿಕೆಗಳನ್ನು ಅರ್ಥಮಾಡಿಕೊಂಡು ಗೌರವಿಸಬೇಕು” ಎಂದರು.

ಗ್ಯಾನಿ ಮಂಗಲ್ ಸಿಂಗ್ ಅವರು, ಎಲ್ಲಾ ಸಮುದಾಯಗಳ ನಡುವೆ ಸೇತುವೆಗಳನ್ನು ನಿರ್ಮಿಸುವ ಮಹತ್ವದ ಕುರಿತು ಮಾತನಾಡಿದರು. ಜನರಿಗೆ ನಿಸ್ವಾರ್ಥ ಸೇವೆಯು ಇದನ್ನು ಸಾಧಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಹೇಳಿದರು.

ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಕಾರ್ಯದರ್ಶಿ ಶೈಸ್ತಾ ರಿಫತ್ ಅವರು ‘ಕೋಮು ಸಾಮರಸ್ಯದಲ್ಲಿ ಮಹಿಳೆಯರ ಪಾತ್ರ’ದ ಕುರಿತು ಮಾತನಾಡಿದರು. “ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರನ್ನು (ಮಹಿಳೆಯರು) ಈ ಪ್ರಯತ್ನದಿಂದ ಹೊರಗಿಡಲು ಸಾಧ್ಯವಿಲ್ಲ. ಮಹಿಳೆಯರು ಮುಂದೆ ಬಂದು ಸಕ್ರಿಯ ಪಾತ್ರ ವಹಿಸಬೇಕು. ಈ ನಿಟ್ಟಿನಲ್ಲಿ ಸಮಾಜ ಮತ್ತು ರಾಷ್ಟ್ರವು ಅವರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಬೇಕು” ಎಂದು ಅವರು ಹೇಳಿದರು.

ಕಾರ್ಯಕ್ರಮದ ಸಮಯದಲ್ಲಿ, ಧರಮಿಕ್ ಜನ ಮೋರ್ಚಾ ಮತ್ತು ಸದ್ಭಾವನಾ ಮಂಚ್ ಅನ್ನು ದೇಶಾದ್ಯಂತ ಹೆಚ್ಚು ಸಕ್ರಿಯ ಮತ್ತು ಪರಿಣಾಮಕಾರಿಯಾಗಿಸಲು ವಿವಿಧ ವಿಚಾರಗಳ ಕುರಿತು ಭಾಗವಹಿಸುವವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜಮಾತೆ-ಇ-ಇಸ್ಲಾಮಿ ಹಿಂದ್‌ನ ಉಪಾಧ್ಯಕ್ಷ ಪ್ರೊ. ಸಲೀಂ ಎಂಜಿನಿಯರ್, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಮತ್ತು ತಾರತಮ್ಯವಿಲ್ಲದೆ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...