Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...