Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....