Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...