Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...