Homeಮುಖಪುಟಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ ಲೋಕಸಭೆ ಕ್ಷೇತ್ರದಲ್ಲಿ ಕೂಡ ಇಂತದ್ದೆ ಬೆಳವಣಿಗೆ ನಡೆದಿದೆ. ಅಲ್ಲಿನ ಮುಸ್ಲಿಂ ಮತದಾರರು ಹೆಚ್ಚಾಗಿ ನಮಗೆ ಮತದಾನಕ್ಕೆ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ, ಆದರೆ ಹಿಂದೂ ಸಮುದಾಯದ ಜನರಿಂದ ಇಂತಹ ಯಾವುದೇ ಆರೋಪಗಳು ಕೇಳಿ ಬಂದಿಲ್ಲ.

ದೇಶದ ಹಲವು ರಾಜ್ಯಗಳಲ್ಲಿ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆದಿದೆ. ಮಥುರಾದ ಗಾಲಿ ಅಹಿರಾನ್‌ನಲ್ಲಿ 74 ವರ್ಷದ ಜಮರುಲ್ ನಿಶಾ ಅವರ ಕುಟುಂಬದ ಒಂಬತ್ತು ಮತದಾರರಲ್ಲಿ ಒಬ್ಬರಿಗೂ ವೋಟರ್ ಸ್ಲಿಪ್  ಸಿಕ್ಕಿಲ್ಲ. ಈ ರೀತಿಯಾಗಿರುವುದು ಇದೇ ಮೊದಲು ಎಂದು ಅವರ ಪತಿ ಮೊಹಮ್ಮದ್ ಸಬೀರ್ ಹೇಳಿದ್ದಾರೆ.

ವೋಟರ್ ಸ್ಲಿಪ್ ಎನ್ನುವುದು ಭಾರತದ ಚುನಾವಣಾ ಆಯೋಗದಿಂದ ಚುನಾವಣೆಯ ಮೊದಲು ನೋಂದಾಯಿತ ಮತದಾರರಿಗೆ ನೀಡುವ ದಾಖಲೆಯಾಗಿದೆ. ಇದು ಮತದಾರರ ನೋಂದಣಿಯ ದೃಢೀಕರಣವಾಗಿದೆ ಮತ್ತು ಎಲ್ಲಿ ಮತ್ತು ಯಾವಾಗ ಮತ ಚಲಾಯಿಸಬೇಕು ಎಂಬ ಮಾಹಿತಿಯನ್ನು ಒದಗಿಸುತ್ತದೆ.

ವೋಟರ್ ಸ್ಲಿಪ್ ಇಲ್ಲ ಎಂದು ಮಥುರಾ ಸಂಸದೀಯ ಕ್ಷೇತ್ರದ ಮತದಾರರಾದ ಜಮರುಲ್ ನಿಶಾ ಅವರು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಅವರು ಮತಗಟ್ಟೆಗೆ ಹೋಗಿದ್ದಾರೆ, ಪಟ್ಟಿಯಲ್ಲಿ ತನ್ನ ಹೆಸರನ್ನು ಪತ್ತೆ ಹಚ್ಚಿ ವೋಟರ್ ಸ್ಲಿಪ್ ಪಡೆದುಕೊಂಡಿದ್ದಾರೆ, ಆದರೆ ಅವರಿಗೆ ಮತ ಚಲಾಯಿಸುವ ಅವಕಾಶ ಸಿಕ್ಕಿಲ್ಲ. ಯಾಕೆಂದರೆ ಬೂತ್‌ನಲ್ಲಿದ್ದ ಪಟ್ಟಿಯಲ್ಲಿ ‘ಜಮರುಲ್’ ಎಂದು ಮಾತ್ರ ನಮೂದಿಸಲಾಗಿತ್ತು, ‘ಜಮರುಲ್ ನಿಶಾ’  ಎಂದು ಹೆಸರು ಇರಲಿಲ್ಲ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಮತದಾರರ ಪಟ್ಟಿಯಲ್ಲಿ ಜಮರುಲ್ ನಿಶಾ ಅವರ ಪೂರ್ಣ ಹೆಸರನ್ನು ಉಲ್ಲೇಖಿಸಲಾಗಿದೆ. ನಾನು ಅವರೊಂದಿಗೆ ಈ ಬಗ್ಗೆ ತರ್ಕಿಸಲು ಪ್ರಯತ್ನಿಸಿದೆ, ಆದರೆ ಅಲ್ಲಿದ್ದ ಪೋಲೀಸ್ ಅಧಿಕಾರಿಗಳು ನನ್ನನ್ನು ಗೇಲಿ ಮಾಡಿದರು, ಇಲ್ಲಿ ನಿಂತು ದಿನವಿಡೀ ಜಗಳವಾಡಲು ನಿಮಗೆ ತುಂಬಾ ವಯಸ್ಸಾಗಿಲ್ಲವೇ? ಎಂದು ಪ್ರಶ್ನಿಸಿದರು, ಆದ್ದರಿಂದ ನಾನು ವಾಪಾಸ್ಸು ಬಂದೆ ಎಂದು 74ರ ಹರೆಯದ ‘ಜಮರುಲ್ ನಿಶಾ’ ಹೇಳಿದ್ದಾರೆ.

ಮಥುರಾ ಸಂಸದೀಯ ಕ್ಷೇತ್ರವು ಎರಡು ದಶಕಗಳಲ್ಲಿ ಅತ್ಯಂತ ಕಡಿಮೆ 49.4% ಮತದಾನವನ್ನು ದಾಖಲಿಸಿದೆ    2019ರ ಲೋಕಸಭೆ ಚುನಾವಣೆಯಲ್ಲಿ 60.7% ಮತದಾನವಾಗಿತ್ತು. ಇದು ಉತ್ತರ ಪ್ರದೇಶದಲ್ಲಿ ಈವರೆಗೆ ನಡೆದ 16 ಕ್ಷೇತ್ರಗಳ ನಡೆದ ಮತದಾನಗಳಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ಕ್ಷೇತ್ರವಾಗಿದೆ. ಮತದಾರರ ಚೀಟಿಗಳ ವಿತರಣೆ ಮಾಡದಿರುವುದು, ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಅಥವಾ ಮತದಾರರ ಪಟ್ಟಿಯಲ್ಲಿ ತಪ್ಪಾಗಿ ಹೆಸರು ಬರೆದಿರುವುದು ಮತ್ತು ಮತದಾರರ ಗುರುತಿನ ಚೀಟಿಗಳ ಪಡೆಯುವಲ್ಲಿ ಅಡಚಣೆ, ಈ ಎಲ್ಲಾ ಕಾರಣಗಳಿಂದಾಗಿ ಮುಸ್ಲಿಂ ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ ಎಂಬ ಹೇಳಿಕೆಗಳ ಮಧ್ಯೆ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಆದರೆ ಅಲ್ಲಿನ ಹಿಂದೂ ನಿವಾಸಿಗಳು ಅಂತಹ ಯಾವುದೇ ಸಮಸ್ಯೆಯ ಬಗ್ಗೆ ಹೇಳಿಲ್ಲ. ಗಾಲಿ ಅಹಿರಾನ್‌ನಲ್ಲಿರುವ ಸಬೀರ್ ಮತ್ತು ಜಮ್ರುಲ್ ಅವರ ಮನೆಯ ಪಕ್ಕದಲ್ಲೇ ವಾಸಿಸುವ 47 ವರ್ಷದ ಮೂಲಚಂದ್ ಅವರು ಚುನಾವಣೆಗೆ ಮುನ್ನ ಕುಟುಂಬದ ಎಲ್ಲಾ 6 ಸದಸ್ಯರಿಗೆ ವೋಟರ್ ಸ್ಲಿಪ್‌ಗಳನ್ನು ಸ್ವೀಕರಿಸಿದ್ದಾರೆ. ಆದರೆ ಪಕ್ಕದಲ್ಲೇ ವಾಸಿಸುತ್ತಿದ್ದ ಸಬೀರ್ ಮತ್ತು ಜಮ್ರುಲ್ ಕುಟುಂಬಕ್ಕೆ ಸ್ಲಿಪ್‌ ವಿತರಿಸಲಾಗಿಲ್ಲ.

ದೆಹಲಿಯಿಂದ 170ಕಿಮೀ ದೂರದಲ್ಲಿರುವ ‘ಮಥುರಾ’ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದೆ. ಮಥುರಾ ಸಂಸದೀಯ ಕ್ಷೇತ್ರದಲ್ಲಿ 2014 ಮತ್ತು 2019ರಲ್ಲಿ ನಟಿ ಹೇಮಾ ಮಾಲಿನಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ವರ್ಷ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಧಂಗರ್ ಮತ್ತು ಬಹುಜನ ಸಮಾಜ ಪಕ್ಷದ ಸುರೇಶ್ ಸಿಂಗ್ ವಿರುದ್ಧ ಮಾಲಿನಿ ಈ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

2011ರ ಜನಗಣತಿಯ ಪ್ರಕಾರ ಮಥುರಾ ಜಿಲ್ಲೆಯ ಜನಸಂಖ್ಯೆಯಲ್ಲಿ ಮುಸ್ಲಿಮರು 8.5% ರಷ್ಟಿದ್ದಾರೆ. ಶಾಹಿ ಈದ್ಗಾ ಮಸೀದಿಯ ಎದುರುಗಡೆ ದೀಗ್ ಗೇಟ್ ಇದೆ, ಅಲ್ಲಿ ಮೊಹಮ್ಮದ್ ಸಾಬು(62) ಹಿತ್ತಾಳೆ ವಸ್ತುಗಳನ್ನು ಸಂಗ್ರಹಿಸಿ ಸ್ಥಳೀಯ ಉತ್ಪಾದನಾ ಸಂಸ್ಥೆಗಳಿಗೆ ಮಾರಾಟ ಮಾಡುವ ಅಂಗಡಿಯನ್ನು ನಡೆಸುತ್ತಿದ್ದಾರೆ. ಮಥುರಾದಲ್ಲಿ ನಡೆದ ಮತದಾನದ ಮರುದಿನ ಈ ಬಾರಿ ನನಗೆ ಮತ ಚಲಾಯಿಸಲು ಸಾಧ್ಯವಾಗಲಿಲ್ಲ ಎಂದು ಸಾಬು ಹೇಳಿದ್ದಾರೆ. ಮತಗಟ್ಟೆಯಲ್ಲಿನ ಮ್ಯಾನೇಜರ್ ನನ್ನ ಹೆಸರು ಪಟ್ಟಿಯಲ್ಲಿಲ್ಲ ಎಂದು ಹೇಳಿದರು. 30 ನಿಮಿಷಗಳ ಕಾಲ ಅವರು ಫೈಲ್‌ಗಳನ್ನು ಪರಿಶೀಲಿಸಿದರು ಆದರೆ ನನ್ನ ಹೆಸರನ್ನು ಕಂಡು ಹಿಡಿಯಲಾಗಲಿಲ್ಲ. ನಾನು ನನ್ನ ಜೀವನದಲ್ಲಿ ಬಹುಪಾಲು ಚುನಾವಣೆಗಳಲ್ಲಿ ಸ್ಥಳೀಯ ಜೈನ್ ಐಡಿಯಲ್ ಜೂನಿಯರ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದೇನೆ. ಈ ಹಿಂದೆ ಲೋಕಸಭೆ ಅಥವಾ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿ ಆಗಿಲ್ಲ. ನನ್ನ ಕುಟುಂಬದಲ್ಲಿ ಐವರು ಮತದಾರರಿದ್ದಾರೆ. ಆದರೆ ನಮ್ಮಲ್ಲಿ ಮೂವರು ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಶಬ್ಬೀರ್ ಅಲಿ(65) ಸಾಬು ಅವರ ಅಂಗಡಿಯಿಂದ ಹಿತ್ತಾಳೆಯನ್ನು ತನ್ನ ಗ್ರಾಹಕರಿಗೆ ಸಾಗಿಸುತ್ತಾರೆ, ಮಥುರಾದ ಗೋವಿಂದಪುರದಲ್ಲಿರುವ ತಮ್ಮ ಮತದಾನ ಕೇಂದ್ರದಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಅವರು ಎದುರಿಸಿದ್ದಾರೆ. ನಮ್ಮ ಕುಟುಂಬದಲ್ಲಿ 8 ಮತದಾರರಿದ್ದಾರೆ, ಆದರೆ ನನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳ ಹೆಸರು ಪಟ್ಟಿಯಲ್ಲಿರಲಿಲ್ಲ ಎಂದು ಹೇಳಿದ್ದಾರೆ.

ಮಥುರಾದ ಶಾಹಿ ಈದ್ಗಾ ಮಸೀದಿಯ ಸುತ್ತಮುತ್ತಲಿನ ನೆರೆಹೊರೆಗಳಲ್ಲಿ ಮುಸ್ಲಿಮರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಅವರ ಮತಗಳು ಹೆಚ್ಚಾಗಿ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಡುವೆ ಹಂಚಿಹೋಗಿವೆ. ಈ ವರ್ಷದ ಆರಂಭದಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್‌ಗೆ ಸೇರ್ಪಡೆಗೊಂಡ ಆರ್‌ಎಲ್‌ಡಿ ಈ ಬಾರಿ ಮಥುರಾದಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಇಲ್ಲಿನ ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಿವಾಸಿಗಳನ್ನು ಹೊಂದಿರುವ ಗಾಲಿ ಅಹಿರಾನ್‌ನಲ್ಲಿ ಈ ಬಾರಿ ಹಿಂದೂಗಳಿಗಿಂತ ಹೆಚ್ಚಾಗಿ ಮುಸ್ಲಿಂ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ಆರೋಪವನ್ನು ಮಾಡಿದ್ದಾರೆ, ನಮಗೆ ನಮ್ಮ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾದ ಅಂಶಗಳ ಬಗ್ಗೆ ಚುನಾವಣಾ ಆಯೋಗ ಉತ್ತರಿಸಬೇಕಿದೆ.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...