Homeಮುಖಪುಟ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

- Advertisement -
- Advertisement -

ಲಕ್ನೋ: ದೇಶದ ಕೋಮು ಸಾಮರಸ್ಯ ಕೆಡಿಸುವ ಉದ್ದೇಶದಿಂದ ಮಾಡಿರುವ ಭಾಷಣವನ್ನು ಉತ್ತರಪ್ರದೇಶದ ಬಿಜೆಪಿ ಶಾಸಕರೊಬ್ಬರು ಮಾಡಿಕೊಂಡಿದ್ದಲ್ಲದೆ ಅದನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕ ರಾಘವೇಂದ್ರ ಸಿಂಗ್ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ನಾನು ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರು ತಿಲಕ ಧರಿಸಬೇಕಾಗುತ್ತದೆ” ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಮು ಪ್ರಚೋದನೆಗೆ ರಾಘವೇಂದ್ರ ಸಿಂಗ್ ಯತ್ನಿಸಿದ್ದಾರೆ.

ಪೂರ್ವ ಯುಪಿಯ ಡೊಮರಿಯಾಗಂಜ್‌ನ ಶಾಸಕ ತಮ್ಮ ಭಾಷಣವನ್ನು ಸಮರ್ಥಿಸಿಕೊಂಡಿದ್ದು, “ಇಸ್ಲಾಮಿಕ್ ಭಯೋತ್ಪಾದನೆ”ಯನ್ನು ವಿರೋಧಿಸಿ ಮಾಡಿದ ಭಾಷಣವೆಂದು ಹೇಳಿಕೊಂಡಿದ್ದಾರೆ.

“ಇಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಇದ್ದಾಗ, ಹಿಂದೂಗಳು ಟೋಪಿಗಳನ್ನು ಧರಿಸುವಂತೆ ಒತ್ತಾಯಿಸಲಾಯಿತು. ನಾನು ಷರತ್ತು ವಿಧಿಸಿದೆ. ನಾನು ಹಿಂದೂ ಹೆಮ್ಮೆಗಾಗಿ ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧನಿದ್ದೇನೆ. ನನ್ನ ಪ್ರಕಾರ ಮುಸ್ಲಿಮರು ನನ್ನನ್ನು ಸೋಲಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದರೆ, ನಾನು ಮೌನವಾಗಿರುವುದಿಲ್ಲ” ಎಂದು ರಾಘವೇಂದ್ರ ಸಿಂಗ್ ವಿಡಿಯೋದಲ್ಲಿ ಪ್ರಚೋದಿಸಿದ್ದಾರೆ.

ಸಿಂಗ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಚಿಸಿದ ಬಲಪಂಥೀಯ ಗುಂಪಿನ ಹಿಂದೂ ಯುವ ವಾಹಿನಿಯ ಯುಪಿ ಉಸ್ತುವಾರಿಯಾಗಿರುವುದು ಉಲ್ಲೇಖನೀಯ. “ಸಿಂಗ್‌ ಮಾಡಿರುವ ಪ್ರಚೋದನಕಾರಿ ಭಾಷಣ ವೈರಲ್ ಆದ ಬೆನ್ನಲ್ಲೇ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಯುಪಿ ಪೊಲೀಸರು ಹೇಳಿದ್ದಾರೆ.

“ನಾನು ಮತ್ತೆ ಶಾಸಕನಾದರೆ, ಟೋಪಿಗಳನ್ನು ತ್ಯಜಿಸಿ ಮಿಯಾನ್ ಲಾ‌ಗ್‌‌ಗಳು (ಮುಸ್ಲಿಮರಿಗೆ ಅವಹೇಳನಕಾರಿಯಾಗಿ ಬಳಸಲಾಗುವ ಪದ) ತಿಲಕವನ್ನು ಧರಿಸುವರು” ಎಂದು ಸಿಂಗ್ ಹೇಳಿದ್ದಾರೆ.

“ಮೊದಲ ಬಾರಿಗೆ ಇಷ್ಟು ಹಿಂದೂಗಳು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೊಮರಿಯಾಗಂಜ್‌ನಲ್ಲಿ ‘ಸಲಾಮ್’ ಇದೆಯೇ ಅಥವಾ ‘ಜೈ ಶ್ರೀ ರಾಮ್’ ಇದೆಯೇ?” ಎಂದು ಸಿಂಗ್ ಪ್ರಚೋದಿಸಿದ್ದಾರೆ.

2017ರಲ್ಲಿ ಸಿಂಗ್‌ ಅವರು ಡೊಮರಿಯಾಗಂಜ್ ಕ್ಷೇತ್ರದಿಂದ ಸುಮಾರು 200 ಮತಗಳ ಅಂತರದಿಂದ ಗೆದ್ದಿದ್ದರು. ವಿವಿಧ ಸಮುದಾಯಗಳನ್ನು ಹೊಂದಿರುವ ಡೊಮರಿಯಾಗಂಜ್ ಕ್ಷೇತ್ರದ ಚುನಾವಣೆಯು ಆರನೇ ಹಂತದಲ್ಲಿ ನಡೆಯಲಿದೆ.

ಪೂರ್ವ ಯುಪಿಯಲ್ಲಿ ಹಲವಾರು ಬಿಜೆಪಿ ನಾಯಕರು ಮತದಾನಕ್ಕೂ ಮುನ್ನ ಧ್ರುವೀಕರಣದ ಮಾತುಗಳನ್ನು ಆಡಿದ್ದಾರೆ. ಕಳೆದ ತಿಂಗಳು ಬಿಜೆಪಿಯು ಅನೇಕ ಹಿಂದುಳಿದ ವರ್ಗಗಳ ನಾಯಕರನ್ನು ಕಳೆದುಕೊಂಡಿದೆ. ಪಕ್ಷ ತೊರೆದ ಹಿಂದುಳಿದ ವರ್ಗಗಳ ನಾಯಕರು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಯುಪಿಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...