Homeಮುಖಪುಟ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

- Advertisement -
- Advertisement -

ಲಕ್ನೋ: ದೇಶದ ಕೋಮು ಸಾಮರಸ್ಯ ಕೆಡಿಸುವ ಉದ್ದೇಶದಿಂದ ಮಾಡಿರುವ ಭಾಷಣವನ್ನು ಉತ್ತರಪ್ರದೇಶದ ಬಿಜೆಪಿ ಶಾಸಕರೊಬ್ಬರು ಮಾಡಿಕೊಂಡಿದ್ದಲ್ಲದೆ ಅದನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕ ರಾಘವೇಂದ್ರ ಸಿಂಗ್ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ನಾನು ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರು ತಿಲಕ ಧರಿಸಬೇಕಾಗುತ್ತದೆ” ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಮು ಪ್ರಚೋದನೆಗೆ ರಾಘವೇಂದ್ರ ಸಿಂಗ್ ಯತ್ನಿಸಿದ್ದಾರೆ.

ಪೂರ್ವ ಯುಪಿಯ ಡೊಮರಿಯಾಗಂಜ್‌ನ ಶಾಸಕ ತಮ್ಮ ಭಾಷಣವನ್ನು ಸಮರ್ಥಿಸಿಕೊಂಡಿದ್ದು, “ಇಸ್ಲಾಮಿಕ್ ಭಯೋತ್ಪಾದನೆ”ಯನ್ನು ವಿರೋಧಿಸಿ ಮಾಡಿದ ಭಾಷಣವೆಂದು ಹೇಳಿಕೊಂಡಿದ್ದಾರೆ.

“ಇಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಇದ್ದಾಗ, ಹಿಂದೂಗಳು ಟೋಪಿಗಳನ್ನು ಧರಿಸುವಂತೆ ಒತ್ತಾಯಿಸಲಾಯಿತು. ನಾನು ಷರತ್ತು ವಿಧಿಸಿದೆ. ನಾನು ಹಿಂದೂ ಹೆಮ್ಮೆಗಾಗಿ ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧನಿದ್ದೇನೆ. ನನ್ನ ಪ್ರಕಾರ ಮುಸ್ಲಿಮರು ನನ್ನನ್ನು ಸೋಲಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದರೆ, ನಾನು ಮೌನವಾಗಿರುವುದಿಲ್ಲ” ಎಂದು ರಾಘವೇಂದ್ರ ಸಿಂಗ್ ವಿಡಿಯೋದಲ್ಲಿ ಪ್ರಚೋದಿಸಿದ್ದಾರೆ.

ಸಿಂಗ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಚಿಸಿದ ಬಲಪಂಥೀಯ ಗುಂಪಿನ ಹಿಂದೂ ಯುವ ವಾಹಿನಿಯ ಯುಪಿ ಉಸ್ತುವಾರಿಯಾಗಿರುವುದು ಉಲ್ಲೇಖನೀಯ. “ಸಿಂಗ್‌ ಮಾಡಿರುವ ಪ್ರಚೋದನಕಾರಿ ಭಾಷಣ ವೈರಲ್ ಆದ ಬೆನ್ನಲ್ಲೇ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಯುಪಿ ಪೊಲೀಸರು ಹೇಳಿದ್ದಾರೆ.

“ನಾನು ಮತ್ತೆ ಶಾಸಕನಾದರೆ, ಟೋಪಿಗಳನ್ನು ತ್ಯಜಿಸಿ ಮಿಯಾನ್ ಲಾ‌ಗ್‌‌ಗಳು (ಮುಸ್ಲಿಮರಿಗೆ ಅವಹೇಳನಕಾರಿಯಾಗಿ ಬಳಸಲಾಗುವ ಪದ) ತಿಲಕವನ್ನು ಧರಿಸುವರು” ಎಂದು ಸಿಂಗ್ ಹೇಳಿದ್ದಾರೆ.

“ಮೊದಲ ಬಾರಿಗೆ ಇಷ್ಟು ಹಿಂದೂಗಳು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೊಮರಿಯಾಗಂಜ್‌ನಲ್ಲಿ ‘ಸಲಾಮ್’ ಇದೆಯೇ ಅಥವಾ ‘ಜೈ ಶ್ರೀ ರಾಮ್’ ಇದೆಯೇ?” ಎಂದು ಸಿಂಗ್ ಪ್ರಚೋದಿಸಿದ್ದಾರೆ.

2017ರಲ್ಲಿ ಸಿಂಗ್‌ ಅವರು ಡೊಮರಿಯಾಗಂಜ್ ಕ್ಷೇತ್ರದಿಂದ ಸುಮಾರು 200 ಮತಗಳ ಅಂತರದಿಂದ ಗೆದ್ದಿದ್ದರು. ವಿವಿಧ ಸಮುದಾಯಗಳನ್ನು ಹೊಂದಿರುವ ಡೊಮರಿಯಾಗಂಜ್ ಕ್ಷೇತ್ರದ ಚುನಾವಣೆಯು ಆರನೇ ಹಂತದಲ್ಲಿ ನಡೆಯಲಿದೆ.

ಪೂರ್ವ ಯುಪಿಯಲ್ಲಿ ಹಲವಾರು ಬಿಜೆಪಿ ನಾಯಕರು ಮತದಾನಕ್ಕೂ ಮುನ್ನ ಧ್ರುವೀಕರಣದ ಮಾತುಗಳನ್ನು ಆಡಿದ್ದಾರೆ. ಕಳೆದ ತಿಂಗಳು ಬಿಜೆಪಿಯು ಅನೇಕ ಹಿಂದುಳಿದ ವರ್ಗಗಳ ನಾಯಕರನ್ನು ಕಳೆದುಕೊಂಡಿದೆ. ಪಕ್ಷ ತೊರೆದ ಹಿಂದುಳಿದ ವರ್ಗಗಳ ನಾಯಕರು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಯುಪಿಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...