Homeಮುಖಪುಟರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಪರೋಕ್ಷವಾಗಿ ಆರೋಪಿಸಿದ್ದಾರೆ.

- Advertisement -
- Advertisement -

ರಾಜೀವ್ ಗಾಂಧಿ ಭಯವನ್ನು ಸೃಷ್ಟಿಸಲು ತಮಗೆ ದೊರಕಿದ್ದ ಬೃಹತ್ ಬಹುಮತದ ಆದೇಶವನ್ನು ಬಳಸಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾದುದಾಗಿವೆ, ಆದರೂ ಅದು ವಿಭಜಕ ಶಕ್ತಿಗಳ ವಿರುದ್ಧದ ಸೈದ್ಧಾಂತಿಕ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1984 ರಲ್ಲಿ ಭಾರಿ ಬಹುಮತವನ್ನು ಪಡೆದಿದ್ದರು. ಆದರೆ ಭಯದ ವಾತಾವರಣವನ್ನು ಸೃಷ್ಟಿಸಲು, ಜನರನ್ನು ಬೆದರಿಸಲು ಮತ್ತು ಹೆದರಿಸಲು ಅಥವಾ ಸಂಸ್ಥೆಗಳನ್ನು ನಾಶಮಾಡಲು ಇದನ್ನು ಬಳಸಲಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿನ ಅವರ ಈ ಮಾತುಗಳು ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಹಣಕಾಸು ಮಂತ್ರಿ ಪಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ ನಂತರ ಮಹತ್ವ ಪಡೆದುಕೊಂಡಿವೆ. ಸಿಬಿಐ ಮತ್ತು ಇಡಿಯಂತಹ ಕೇಂದ್ರ ತನಿಖಾ ಏಜೆನ್ಸಿಗಳನ್ನು “ವೈಯಕ್ತಿಕ ಸೇಡು ತೀರಿಸಿಕೊಳ್ಳುಲು ಸರ್ಕಾರ ಬಳಸುತ್ತಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ನಂತರ “1989 ರಲ್ಲಿ, ಕಾಂಗ್ರೆಸ್ ಆದ ಬಹುಮತವನ್ನು ಪಡೆಯಲಿಲ್ಲ, ಆದ್ದರಿಂದ ರಾಜೀವ್ ಗಾಂಧಿ ಜನರ ಆದೇಶವನ್ನು ನಯವಾಗಿ ಸ್ವೀಕರಿಸಿದರು. ಪ್ರಸ್ತುತ ಪೀಳಿಗೆಗೆ ನಾನು ಹೇಳಲು ಬಯಸುತ್ತೇನೆ, ಆ ಸಮಯದಲ್ಲಿ ಕಾಂಗ್ರೆಸ್ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದರೂ, ಅವರು ಅಧಿಕಾರಕ್ಕೆ ಹಕ್ಕು ಸಾಧಿಸಲಿಲ್ಲ. ಇದಕ್ಕೆ ಕಾರಣ ಅವರ ಆಂತರಿಕ ನೈತಿಕ ಶಕ್ತಿ ಮತ್ತು ಪ್ರಾಮಾಣಿಕತೆ ಅವರಿಗೆ ಹಾಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದರು.

ತನ್ನ ಗಂಡನ 75 ನೇ ಜನ್ಮದಿನಾಚರಣೆಯು ಕೇವಲ ಕಾಂಗ್ರೆಸ್ ಪಕ್ಷದ ಒಂದು ಆಚರಣೆಯಲ್ಲ. ಆದರೆ ಅವನನ್ನು ನೆನಪಿಟ್ಟುಕೊಳ್ಳುವ, ಅವರ ನಿಲುವುಗಳನ್ನು ಅರ್ಥಮಾಡಿಕೊಳ್ಳುವ ಸಂದರ್ಭ, ಅವರು ಏನು ಸಾಧಿಸಿದರು ಮತ್ತು ಏನನ್ನು ಸಾಧಿಸಲು ಬಯಸಿದ್ದರು ಎಂಬುದರ ಕುರಿತು ಚರ್ಚಿಸಬೇಕಾದ ದಿನ ಇದು. ರಾಜೀವ್ ಗಾಂಧಿಯವರಿಗೆ ಪ್ರಿಯವಾದ ಮೌಲ್ಯಗಳ ಪರ ನಿಲ್ಲುವುದು ಅವರ 75 ನೇ ಜನ್ಮ ದಿನಾಚರಣೆಯಂದು ಅವರಿಗೆ ನಾವು ಸಲ್ಲಿಸುವ ಅತ್ಯುತ್ತಮ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

“ಅವರಿಗೆ ಪ್ರೇರಣೆ ನೀಡಿದ ಮೌಲ್ಯಗಳನ್ನು ಎತ್ತಿಹಿಡಿಯಲು, ಆ ಮೌಲ್ಯಗಳನ್ನು ನಾಶಮಾಡಲು ಮುಂದಾಗಿರುವ ಶಕ್ತಿಗಳನ್ನು ಎದುರಿಸಲು ನಮ್ಮ ಸಂಕಲ್ಪವನ್ನು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪುನರುಚ್ಚರಿಸಲು ಇದು ಒಂದು ಸಂದರ್ಭವಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆಲುವು ಸೋಲು ಅನಿವಾರ್ಯ. ಇಂದು ನಮ್ಮ ಪಕ್ಷ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾಗಿವೆ. ಆದರೆ ವಿಭಜಕ ಶಕ್ತಿಗಳ ವಿರುದ್ಧ ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಬೇಕಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಭಾರತದ ಕಲ್ಪನೆ ಮತ್ತು ನಮ್ಮ ಸಮಾಜದ ಸ್ವರೂಪವನ್ನು ಬದಲಿಸಲು ಹೊರಟಿರುವ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...