Homeಮುಖಪುಟರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಪರೋಕ್ಷವಾಗಿ ಆರೋಪಿಸಿದ್ದಾರೆ.

- Advertisement -
- Advertisement -

ರಾಜೀವ್ ಗಾಂಧಿ ಭಯವನ್ನು ಸೃಷ್ಟಿಸಲು ತಮಗೆ ದೊರಕಿದ್ದ ಬೃಹತ್ ಬಹುಮತದ ಆದೇಶವನ್ನು ಬಳಸಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾದುದಾಗಿವೆ, ಆದರೂ ಅದು ವಿಭಜಕ ಶಕ್ತಿಗಳ ವಿರುದ್ಧದ ಸೈದ್ಧಾಂತಿಕ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1984 ರಲ್ಲಿ ಭಾರಿ ಬಹುಮತವನ್ನು ಪಡೆದಿದ್ದರು. ಆದರೆ ಭಯದ ವಾತಾವರಣವನ್ನು ಸೃಷ್ಟಿಸಲು, ಜನರನ್ನು ಬೆದರಿಸಲು ಮತ್ತು ಹೆದರಿಸಲು ಅಥವಾ ಸಂಸ್ಥೆಗಳನ್ನು ನಾಶಮಾಡಲು ಇದನ್ನು ಬಳಸಲಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿನ ಅವರ ಈ ಮಾತುಗಳು ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಹಣಕಾಸು ಮಂತ್ರಿ ಪಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ ನಂತರ ಮಹತ್ವ ಪಡೆದುಕೊಂಡಿವೆ. ಸಿಬಿಐ ಮತ್ತು ಇಡಿಯಂತಹ ಕೇಂದ್ರ ತನಿಖಾ ಏಜೆನ್ಸಿಗಳನ್ನು “ವೈಯಕ್ತಿಕ ಸೇಡು ತೀರಿಸಿಕೊಳ್ಳುಲು ಸರ್ಕಾರ ಬಳಸುತ್ತಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ನಂತರ “1989 ರಲ್ಲಿ, ಕಾಂಗ್ರೆಸ್ ಆದ ಬಹುಮತವನ್ನು ಪಡೆಯಲಿಲ್ಲ, ಆದ್ದರಿಂದ ರಾಜೀವ್ ಗಾಂಧಿ ಜನರ ಆದೇಶವನ್ನು ನಯವಾಗಿ ಸ್ವೀಕರಿಸಿದರು. ಪ್ರಸ್ತುತ ಪೀಳಿಗೆಗೆ ನಾನು ಹೇಳಲು ಬಯಸುತ್ತೇನೆ, ಆ ಸಮಯದಲ್ಲಿ ಕಾಂಗ್ರೆಸ್ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದರೂ, ಅವರು ಅಧಿಕಾರಕ್ಕೆ ಹಕ್ಕು ಸಾಧಿಸಲಿಲ್ಲ. ಇದಕ್ಕೆ ಕಾರಣ ಅವರ ಆಂತರಿಕ ನೈತಿಕ ಶಕ್ತಿ ಮತ್ತು ಪ್ರಾಮಾಣಿಕತೆ ಅವರಿಗೆ ಹಾಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದರು.

ತನ್ನ ಗಂಡನ 75 ನೇ ಜನ್ಮದಿನಾಚರಣೆಯು ಕೇವಲ ಕಾಂಗ್ರೆಸ್ ಪಕ್ಷದ ಒಂದು ಆಚರಣೆಯಲ್ಲ. ಆದರೆ ಅವನನ್ನು ನೆನಪಿಟ್ಟುಕೊಳ್ಳುವ, ಅವರ ನಿಲುವುಗಳನ್ನು ಅರ್ಥಮಾಡಿಕೊಳ್ಳುವ ಸಂದರ್ಭ, ಅವರು ಏನು ಸಾಧಿಸಿದರು ಮತ್ತು ಏನನ್ನು ಸಾಧಿಸಲು ಬಯಸಿದ್ದರು ಎಂಬುದರ ಕುರಿತು ಚರ್ಚಿಸಬೇಕಾದ ದಿನ ಇದು. ರಾಜೀವ್ ಗಾಂಧಿಯವರಿಗೆ ಪ್ರಿಯವಾದ ಮೌಲ್ಯಗಳ ಪರ ನಿಲ್ಲುವುದು ಅವರ 75 ನೇ ಜನ್ಮ ದಿನಾಚರಣೆಯಂದು ಅವರಿಗೆ ನಾವು ಸಲ್ಲಿಸುವ ಅತ್ಯುತ್ತಮ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

“ಅವರಿಗೆ ಪ್ರೇರಣೆ ನೀಡಿದ ಮೌಲ್ಯಗಳನ್ನು ಎತ್ತಿಹಿಡಿಯಲು, ಆ ಮೌಲ್ಯಗಳನ್ನು ನಾಶಮಾಡಲು ಮುಂದಾಗಿರುವ ಶಕ್ತಿಗಳನ್ನು ಎದುರಿಸಲು ನಮ್ಮ ಸಂಕಲ್ಪವನ್ನು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪುನರುಚ್ಚರಿಸಲು ಇದು ಒಂದು ಸಂದರ್ಭವಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆಲುವು ಸೋಲು ಅನಿವಾರ್ಯ. ಇಂದು ನಮ್ಮ ಪಕ್ಷ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾಗಿವೆ. ಆದರೆ ವಿಭಜಕ ಶಕ್ತಿಗಳ ವಿರುದ್ಧ ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಬೇಕಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಭಾರತದ ಕಲ್ಪನೆ ಮತ್ತು ನಮ್ಮ ಸಮಾಜದ ಸ್ವರೂಪವನ್ನು ಬದಲಿಸಲು ಹೊರಟಿರುವ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...