Homeಮುಖಪುಟರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ರಾಜೀವ್ ಗಾಂಧಿ ಭಯ ಸೃಷ್ಟಿಸಲು ತಮಗೆ ದೊರಕಿದ್ದ ದೊಡ್ಡ ಬಹುಮತವನ್ನು ಬಳಸಿರಲಿಲ್ಲ: ಸೋನಿಯಾ ಗಾಂಧಿ

ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಪರೋಕ್ಷವಾಗಿ ಆರೋಪಿಸಿದ್ದಾರೆ.

- Advertisement -
- Advertisement -

ರಾಜೀವ್ ಗಾಂಧಿ ಭಯವನ್ನು ಸೃಷ್ಟಿಸಲು ತಮಗೆ ದೊರಕಿದ್ದ ಬೃಹತ್ ಬಹುಮತದ ಆದೇಶವನ್ನು ಬಳಸಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ದೊರಕಿರುವ ಬಹುಮತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಗಾಂಧಿಯವರ 75 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾದುದಾಗಿವೆ, ಆದರೂ ಅದು ವಿಭಜಕ ಶಕ್ತಿಗಳ ವಿರುದ್ಧದ ಸೈದ್ಧಾಂತಿಕ ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1984 ರಲ್ಲಿ ಭಾರಿ ಬಹುಮತವನ್ನು ಪಡೆದಿದ್ದರು. ಆದರೆ ಭಯದ ವಾತಾವರಣವನ್ನು ಸೃಷ್ಟಿಸಲು, ಜನರನ್ನು ಬೆದರಿಸಲು ಮತ್ತು ಹೆದರಿಸಲು ಅಥವಾ ಸಂಸ್ಥೆಗಳನ್ನು ನಾಶಮಾಡಲು ಇದನ್ನು ಬಳಸಲಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿನ ಅವರ ಈ ಮಾತುಗಳು ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಹಣಕಾಸು ಮಂತ್ರಿ ಪಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದ ನಂತರ ಮಹತ್ವ ಪಡೆದುಕೊಂಡಿವೆ. ಸಿಬಿಐ ಮತ್ತು ಇಡಿಯಂತಹ ಕೇಂದ್ರ ತನಿಖಾ ಏಜೆನ್ಸಿಗಳನ್ನು “ವೈಯಕ್ತಿಕ ಸೇಡು ತೀರಿಸಿಕೊಳ್ಳುಲು ಸರ್ಕಾರ ಬಳಸುತ್ತಿದೆ” ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ನಂತರ “1989 ರಲ್ಲಿ, ಕಾಂಗ್ರೆಸ್ ಆದ ಬಹುಮತವನ್ನು ಪಡೆಯಲಿಲ್ಲ, ಆದ್ದರಿಂದ ರಾಜೀವ್ ಗಾಂಧಿ ಜನರ ಆದೇಶವನ್ನು ನಯವಾಗಿ ಸ್ವೀಕರಿಸಿದರು. ಪ್ರಸ್ತುತ ಪೀಳಿಗೆಗೆ ನಾನು ಹೇಳಲು ಬಯಸುತ್ತೇನೆ, ಆ ಸಮಯದಲ್ಲಿ ಕಾಂಗ್ರೆಸ್ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದರೂ, ಅವರು ಅಧಿಕಾರಕ್ಕೆ ಹಕ್ಕು ಸಾಧಿಸಲಿಲ್ಲ. ಇದಕ್ಕೆ ಕಾರಣ ಅವರ ಆಂತರಿಕ ನೈತಿಕ ಶಕ್ತಿ ಮತ್ತು ಪ್ರಾಮಾಣಿಕತೆ ಅವರಿಗೆ ಹಾಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದರು.

ತನ್ನ ಗಂಡನ 75 ನೇ ಜನ್ಮದಿನಾಚರಣೆಯು ಕೇವಲ ಕಾಂಗ್ರೆಸ್ ಪಕ್ಷದ ಒಂದು ಆಚರಣೆಯಲ್ಲ. ಆದರೆ ಅವನನ್ನು ನೆನಪಿಟ್ಟುಕೊಳ್ಳುವ, ಅವರ ನಿಲುವುಗಳನ್ನು ಅರ್ಥಮಾಡಿಕೊಳ್ಳುವ ಸಂದರ್ಭ, ಅವರು ಏನು ಸಾಧಿಸಿದರು ಮತ್ತು ಏನನ್ನು ಸಾಧಿಸಲು ಬಯಸಿದ್ದರು ಎಂಬುದರ ಕುರಿತು ಚರ್ಚಿಸಬೇಕಾದ ದಿನ ಇದು. ರಾಜೀವ್ ಗಾಂಧಿಯವರಿಗೆ ಪ್ರಿಯವಾದ ಮೌಲ್ಯಗಳ ಪರ ನಿಲ್ಲುವುದು ಅವರ 75 ನೇ ಜನ್ಮ ದಿನಾಚರಣೆಯಂದು ಅವರಿಗೆ ನಾವು ಸಲ್ಲಿಸುವ ಅತ್ಯುತ್ತಮ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

“ಅವರಿಗೆ ಪ್ರೇರಣೆ ನೀಡಿದ ಮೌಲ್ಯಗಳನ್ನು ಎತ್ತಿಹಿಡಿಯಲು, ಆ ಮೌಲ್ಯಗಳನ್ನು ನಾಶಮಾಡಲು ಮುಂದಾಗಿರುವ ಶಕ್ತಿಗಳನ್ನು ಎದುರಿಸಲು ನಮ್ಮ ಸಂಕಲ್ಪವನ್ನು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪುನರುಚ್ಚರಿಸಲು ಇದು ಒಂದು ಸಂದರ್ಭವಾಗಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಚುನಾವಣೆಯಲ್ಲಿ ಗೆಲುವು ಸೋಲು ಅನಿವಾರ್ಯ. ಇಂದು ನಮ್ಮ ಪಕ್ಷ ಎದುರಿಸುತ್ತಿರುವ ಸವಾಲುಗಳು ಅಸಾಧಾರಣವಾಗಿವೆ. ಆದರೆ ವಿಭಜಕ ಶಕ್ತಿಗಳ ವಿರುದ್ಧ ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಬೇಕಿದೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಭಾರತದ ಕಲ್ಪನೆ ಮತ್ತು ನಮ್ಮ ಸಮಾಜದ ಸ್ವರೂಪವನ್ನು ಬದಲಿಸಲು ಹೊರಟಿರುವ ಶಕ್ತಿಗಳ ವಿರುದ್ಧ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...