Homeಕರೋನಾ ತಲ್ಲಣರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ಇಂದು ಮಧ್ಯಾಹ್ನ ಪತ್ರಕರ್ತರೊಂಗಿಗೆ ಮಾತನಾಡಿದ್ದ ಮುಖ್ಯಮಂತ್ರಿ, "ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ" ಎಂದಿದ್ದರು

- Advertisement -
- Advertisement -

ಹೊಸ ರೂಪಾಂತರಿ ಕೊರೊನಾ ಹಿನ್ನಲೆಯಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ ಎಂದಿದ್ದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದೀಗ ಮತ್ತೇ ತಮ್ಮ ನಿಲುವನ್ನು ಬದಲಿಸಿದ್ದಾರೆ. ಇದೀಗ ಟ್ವೀಟ್‌‌ನಲ್ಲಿ “ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ರಾತ್ರಿ ಕರ್ಫ್ಯೂ ಇರಲಿದೆ” ಎಂದಿದ್ದಾರೆ.

ಇಂದು ಮಧ್ಯಾಹ್ನ ಪತ್ರಕರ್ತರೊಂಗಿಗೆ ಮಾತನಾಡಿದ್ದ ಮುಖ್ಯಮಂತ್ರಿ, “ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ. ಈ ಆದೇಶವು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಆದರೆ ಸಂಜೆ 5:30 ಕ್ಕೆ ಟ್ವೀಟ್ ಮಾಡಿರುವ ಅವರು, “ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ” ಎಂದು ಹೇಳಿದ್ದಾರೆ.

“ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಇನ್ನೆರೆಡು ದಿನದಲ್ಲಿ ಕ್ರಿಸ್‌ಮಸ್ ಹಬ್ಬ ಇರುವುದರಿಂದ ಮುಖ್ಯಮಂತ್ರಿ ರಾತ್ರಿ ಕರ್ಫ್ಯೂ ಹೇರಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡಿಸೆಂಬರ್‌ 21 ರಂದು ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ನ ವಿಜ್ಞಾನಿಗಳು ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ ಮಾರ್ಗಸೂಚಿ ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020 ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ. ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು ಸೇರಿದಂತೆ ಹಲವು ನಿಯಮಗಳನ್ನು ಪರಿಚಯಿಸಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...