Homeಕರೋನಾ ತಲ್ಲಣಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳಬೇಕು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆ ಮಾಡಬೇಕು.

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಕೊರೊನಾ ಅಲೆ ಉಂಟಾಗಿದ್ದು, ಹೊಸ ಸ್ಪರೂಪದಲ್ಲಿ ಅತೀ ವೇಗವಾಗಿ ಹಬ್ಬುತ್ತಿರುವ ಕಾರಣ ಅಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ದೇಶದಲ್ಲೂ ಬ್ರಿಟನ್‌ನಿಂದ ಬಂದಿದ್ದ 6 ಜನರಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ (standard operating procedure) ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ.

ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಕಳೆದ 14 ದಿನದಲ್ಲಿ ಹೊರ ದೇಶಗಳಿಂದ ರಾಜ್ಯಕ್ಕೆ ಬಂದವರಿಗೆ ಟೆಸ್ಟ್

ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು. ಪಾಸಿಟಿವ್ ಬಂದವರನ್ನು ಆರ್​​ಟಿ-ಪಿಸಿಆರ್​ ಟೆಸ್ಟ್​ಗೆ ಒಳಪಡಿಸುವುದು ರಾಜ್ಯ ಸರ್ಕಾರಗಳ ಕೆಲಸ ಎಂದಿದೆ. ನೆಗೆಟಿವ್ ಬಂದವರನ್ನು ಸಹ ಹೋಂ ಐಸೋಲೇಷನ್‌ನಲ್ಲಿ ಇರಿಸಬೇಕು.

ಕೊರೊನಾ ಪಾಸಿಟಿವ್ ಬಂದವರನ್ನು ಹೋಂ ಐಸೋಲೇಷನ್ ಅಥವಾ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಸ್ಥಾಪಿಸಿದ ನಿಗದಿತ ಸ್ಥಳದಲ್ಲಿ ಚಿಕಿತ್ಸೆ ನೀಡಬೇಕು.

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳುವುದು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆಗೆ ಒಳಪಡಿಸಬೇಕು.

ವಿಮಾನಯಾನ ಸಿಬ್ಬಂದಿ ಪ್ರಯಾಣಿಕರಿಗೆ ಎಸ್‌ಒಪಿಗಳ ಬಗ್ಗೆ ವಿವರಿಸಿದ್ದಾರೆಯೇ ಎಂಬುದನ್ನು ವಿಮಾನಯಾನ ಸಂಸ್ಥೆಗಳು ಖಚಿತ ಪಡಿಸಿಕೊಂಡಿರಬೇಕು. ಎಲ್ಲಾ ನಿಯಮಗಳನ್ನು, ಕೊರೊನಾ ಮಾಹಿತಿಯನ್ನು ವಿವರಿಸುವ ಪ್ರಕಟಣೆಯನ್ನು ಸಂಸ್ಥೆಗಳು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ.

ಡಿ.21 ರ ಸೋಮವಾರ ರಾತ್ರಿ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ 266 ಜನ ಪ್ರಯಾಣಿಕರಿದ್ದರು. ಅವರಲ್ಲಿ  6 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.


ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...