Homeಕರೋನಾ ತಲ್ಲಣಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳಬೇಕು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆ ಮಾಡಬೇಕು.

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಕೊರೊನಾ ಅಲೆ ಉಂಟಾಗಿದ್ದು, ಹೊಸ ಸ್ಪರೂಪದಲ್ಲಿ ಅತೀ ವೇಗವಾಗಿ ಹಬ್ಬುತ್ತಿರುವ ಕಾರಣ ಅಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ದೇಶದಲ್ಲೂ ಬ್ರಿಟನ್‌ನಿಂದ ಬಂದಿದ್ದ 6 ಜನರಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ (standard operating procedure) ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ.

ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಕಳೆದ 14 ದಿನದಲ್ಲಿ ಹೊರ ದೇಶಗಳಿಂದ ರಾಜ್ಯಕ್ಕೆ ಬಂದವರಿಗೆ ಟೆಸ್ಟ್

ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು. ಪಾಸಿಟಿವ್ ಬಂದವರನ್ನು ಆರ್​​ಟಿ-ಪಿಸಿಆರ್​ ಟೆಸ್ಟ್​ಗೆ ಒಳಪಡಿಸುವುದು ರಾಜ್ಯ ಸರ್ಕಾರಗಳ ಕೆಲಸ ಎಂದಿದೆ. ನೆಗೆಟಿವ್ ಬಂದವರನ್ನು ಸಹ ಹೋಂ ಐಸೋಲೇಷನ್‌ನಲ್ಲಿ ಇರಿಸಬೇಕು.

ಕೊರೊನಾ ಪಾಸಿಟಿವ್ ಬಂದವರನ್ನು ಹೋಂ ಐಸೋಲೇಷನ್ ಅಥವಾ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಸ್ಥಾಪಿಸಿದ ನಿಗದಿತ ಸ್ಥಳದಲ್ಲಿ ಚಿಕಿತ್ಸೆ ನೀಡಬೇಕು.

ಸೋಂಕಿತರು ಹೊಸ ಸ್ವರೂಪದ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಐಸೋಲೇಷನ್​ ಕೇಂದ್ರದಲ್ಲಿ ಉಳಿಸಿಕೊಳ್ಳುವುದು. ಕೊರೊನಾ ನಿಯಮದಂತೆ ಚಿಕಿತ್ಸೆ ನೀಡಿ 14 ದಿನಗಳ ನಂತರ ಮತ್ತೆ ಪರೀಕ್ಷೆಗೆ ಒಳಪಡಿಸಬೇಕು.

ವಿಮಾನಯಾನ ಸಿಬ್ಬಂದಿ ಪ್ರಯಾಣಿಕರಿಗೆ ಎಸ್‌ಒಪಿಗಳ ಬಗ್ಗೆ ವಿವರಿಸಿದ್ದಾರೆಯೇ ಎಂಬುದನ್ನು ವಿಮಾನಯಾನ ಸಂಸ್ಥೆಗಳು ಖಚಿತ ಪಡಿಸಿಕೊಂಡಿರಬೇಕು. ಎಲ್ಲಾ ನಿಯಮಗಳನ್ನು, ಕೊರೊನಾ ಮಾಹಿತಿಯನ್ನು ವಿವರಿಸುವ ಪ್ರಕಟಣೆಯನ್ನು ಸಂಸ್ಥೆಗಳು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ.

ಡಿ.21 ರ ಸೋಮವಾರ ರಾತ್ರಿ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ 266 ಜನ ಪ್ರಯಾಣಿಕರಿದ್ದರು. ಅವರಲ್ಲಿ  6 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.


ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...