Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...