Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...