Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....