Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...