Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...