Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...