Homeಮುಖಪುಟಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ- ಭಾರತಿರಾಜಾ

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಬಯೋಪಿಕ್ “800” ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಮುತ್ತಯ್ಯ ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದಾರೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರದ ಫಸ್ಟ್‌ಲುಕ್ ಈ ವಾರ ಬಿಡುಗಡೆಯಾಗಿದ್ದು, ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಮುತ್ತಯ್ಯ ಮುರುಳೀಧರನ್ ಈ ಹಿಂದೆ ವಿವಾದಾತ್ಮಕ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದರಿಂದ ತಮಿಳುನಾಡಿನಲ್ಲಿ ಇವರ ಚಿತ್ರಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿದ ಮುತ್ತಯ್ಯ, “ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

“ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ಅವರು ಹೇಳಿದರು.

ಶ್ರೀಲಂಕನ್ ತಮಿಳರಿಗೆ ಅಲ್ಲಿ ತಾರತಮ್ಯವಿದೆ ಎಂದು ದಶಕಗಳಿಂದ ಆರೋಪಗಳಿವೆ. ಹಲವಾರು ವರ್ಷಗಳಿಂದ ಸಶಸ್ತ್ರ ಹೋರಾಟ ನಡೆಸಿದ ಸಶಸ್ತ್ರ ಲಂಕಾ ತಮಿಳು ಗುಂಪಾದ ಎಲ್‌ಟಿಟಿಇಯನ್ನು 2009 ರಲ್ಲಿ ಲಂಕಾ ಪಡೆಗಳು ಹತ್ತಿಕ್ಕಿದವು. ಯುದ್ಧ ಮುಗಿದಾಗ, ಬೃಹತ್ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಬಾಂಬ್ ಸ್ಫೋಟಗಳಲ್ಲಿ ಲಕ್ಷಕ್ಕೂ ಹೆಚ್ಚು ತಮಿಳು ನಾಗರಿಕರ ಸಾವುಗಳು ವರದಿಯಾಗಿದ್ದವು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

“ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ಹಿರಿಯ ನಿರ್ದೇಶಕ ಭಾರತಿರಾಜ ಹೇಳಿದ್ದಾರೆ.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ಮಾಪಕರಾದ ದಾರ್ ಮೋಷನ್ ಪಿಕ್ಚರ್ಸ್, “ಈ ಚಿತ್ರವು ಕೇವಲ ಕ್ರೀಡಾಪಟುವಿನ ಜೀವನಚರಿತ್ರೆಯಾಗಿದ್ದು, ಇದು ಶ್ರೀಲಂಕಾದಲ್ಲಿ ತಮಿಳರ ಹೋರಾಟಕ್ಕೆ ಹಿನ್ನಡೆಯಾಗಿಸುವ ಯಾವುದೇ ದೃಶ್ಯಗಳನ್ನು ಪ್ರದರ್ಶಿಸುವುದಿಲ್ಲ” ಎಂದು ಹೇಳಿದೆ.


ಇದನ್ನೂ ಓದಿ: ಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...