Homeಮುಖಪುಟಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ- ಭಾರತಿರಾಜಾ

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಬಯೋಪಿಕ್ “800” ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಮುತ್ತಯ್ಯ ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದಾರೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರದ ಫಸ್ಟ್‌ಲುಕ್ ಈ ವಾರ ಬಿಡುಗಡೆಯಾಗಿದ್ದು, ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಮುತ್ತಯ್ಯ ಮುರುಳೀಧರನ್ ಈ ಹಿಂದೆ ವಿವಾದಾತ್ಮಕ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದರಿಂದ ತಮಿಳುನಾಡಿನಲ್ಲಿ ಇವರ ಚಿತ್ರಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿದ ಮುತ್ತಯ್ಯ, “ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

“ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ಅವರು ಹೇಳಿದರು.

ಶ್ರೀಲಂಕನ್ ತಮಿಳರಿಗೆ ಅಲ್ಲಿ ತಾರತಮ್ಯವಿದೆ ಎಂದು ದಶಕಗಳಿಂದ ಆರೋಪಗಳಿವೆ. ಹಲವಾರು ವರ್ಷಗಳಿಂದ ಸಶಸ್ತ್ರ ಹೋರಾಟ ನಡೆಸಿದ ಸಶಸ್ತ್ರ ಲಂಕಾ ತಮಿಳು ಗುಂಪಾದ ಎಲ್‌ಟಿಟಿಇಯನ್ನು 2009 ರಲ್ಲಿ ಲಂಕಾ ಪಡೆಗಳು ಹತ್ತಿಕ್ಕಿದವು. ಯುದ್ಧ ಮುಗಿದಾಗ, ಬೃಹತ್ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಬಾಂಬ್ ಸ್ಫೋಟಗಳಲ್ಲಿ ಲಕ್ಷಕ್ಕೂ ಹೆಚ್ಚು ತಮಿಳು ನಾಗರಿಕರ ಸಾವುಗಳು ವರದಿಯಾಗಿದ್ದವು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

“ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ಹಿರಿಯ ನಿರ್ದೇಶಕ ಭಾರತಿರಾಜ ಹೇಳಿದ್ದಾರೆ.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ಮಾಪಕರಾದ ದಾರ್ ಮೋಷನ್ ಪಿಕ್ಚರ್ಸ್, “ಈ ಚಿತ್ರವು ಕೇವಲ ಕ್ರೀಡಾಪಟುವಿನ ಜೀವನಚರಿತ್ರೆಯಾಗಿದ್ದು, ಇದು ಶ್ರೀಲಂಕಾದಲ್ಲಿ ತಮಿಳರ ಹೋರಾಟಕ್ಕೆ ಹಿನ್ನಡೆಯಾಗಿಸುವ ಯಾವುದೇ ದೃಶ್ಯಗಳನ್ನು ಪ್ರದರ್ಶಿಸುವುದಿಲ್ಲ” ಎಂದು ಹೇಳಿದೆ.


ಇದನ್ನೂ ಓದಿ: ಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...