Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...