Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...