Homeಕರ್ನಾಟಕಮುಟ್ಟಿನ ಬೆಳಕು : ಸತ್ಯಾ ಎಸ್

ಮುಟ್ಟಿನ ಬೆಳಕು : ಸತ್ಯಾ ಎಸ್

- Advertisement -
- Advertisement -

‘ಮುಟ್ಟಿನಿಂದ ಹುಟ್ಟು’ ಎನ್ನುವ ಸರಳ ಸತ್ಯ ಎಲ್ಲರಿಗೂ ಬೆಳಕಿನಷ್ಟು ನಿಚ್ಚಳವಾಗಿದ್ದರೂ, ಮುಟ್ಟನ್ನು ಮೈಲಿಗೆ ಎನ್ನುವಷ್ಟು ದ್ರಾಷ್ಟ್ಯ ಮನುಷ್ಯ ಕುಲವನ್ನು ಕಾಡುತ್ತಿರುವುದು ಗಂಭೀರವಾದ ವಿಷಯ. ತನ್ನ ಹುಟ್ಟಿಗೆ ಕಾರಣವಾದ, ನೈಸರ್ಗಿಕವಾದ, ವೈಜ್ಞಾನಿಕವಾದ ಕ್ರಿಯೆಯನ್ನೇ ಮನುಷ್ಯ ತನ್ನ ಅಹಂಕಾರ, ಅಧಿಕಾರ ಲಾಲಸೆ, ದೊಡ್ಡಸ್ತಿಕೆಯ ಅಸ್ತ್ರವಾಗಿ ಬಳಸುತ್ತಿರುವುದು ಮನುಷ್ಯ ಕುಲ ಇನ್ನೂ ಎಷ್ಟೊಂದು ಅವೈಜ್ಞಾನಿಕವಾಗಿ, ಅವೈಚಾರಿಕಾಗಿ ಹಾಗೂ ಅನೈಸರ್ಗಿಕವಾಗಿ ಆಲೋಚಿಸುತ್ತಿದೆ, ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಅಪ್ರಜಾಸತ್ತಾತ್ಮಕವಾದ ದಸರಾ ಆಚರಣೆಯನ್ನು ಉದ್ಘಾಟಿಸಿದ ಪುರೋಗಾಮಿ ಚಿಂತನೆಯ ಲೇಖಕ ಎಸ್ ಎಲ್ ಬೈರಪ್ಪನವರು ಮುಟ್ಟಾಗುವ ಹೆಂಗಸರು ದೇವಸ್ಥಾನಕ್ಕೆ ಹೋಗುವಂತಿಲ್ಲ, ಆಫೀಸಿಗೆ ಹೋಗಬಹುದು ಎನ್ನುವ ಮೂಲಕ ಬಹುಪಾಲು ಮನುಷ್ಯರ ಹಿಮ್ಮುಖದ ಚಲನೆಯನ್ನು ಮತ್ತೆ ಪ್ರದರ್ಶಿಸಿದ್ದಾರೆ. ಹೆಣ್ಣನ್ನು ನಿಯಂತ್ರಿಸುವ ಮತ್ತು ಬಳಸಿಕೊಳ್ಳುವ ಪಿತೃಪ್ರಧಾನ ಹಾಗೂ ಪಾಳೇಗಾರಿ ಮನೋಭಾವವನ್ನು ಯಾವ ಹಿಂಜರಿಕೆ, ಸಂಕೋಚವಿಲ್ಲದೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ನೀಲಾಂಚಲದಲ್ಲಿರುವ, ಫಲವಂತಿಕೆಯ ಸ್ವರೂಪ ಎಂದು ಹೆಸರಾದ ದೇವಸ್ಥಾನ, ಕಾಮಾಕ್ಯ ದೇವಿಯ ದೇವಸ್ಥಾನ. ಗರ್ಭಾಶಯ ಆಕೃತಿಯ ಗರ್ಭಗೃಹ, ಯೋನಿ ರೂಪದ ದೇವತೆ ಮತ್ತು ನಸುಗೆಂಪು ಬಣ್ಣದ ಯೋನಿಯಿಂದ ಸ್ರವಿಸುವ ನೀರು- ಇವು ಆ ದೇವಾಲಯದ ಮುಖ್ಯಾಂಶಗಳು. ತಮ್ಮ ಒಂದೊಂದು ಕಾದಂಬರಿಗೂ ವರ್ಷಾನುಗಟ್ಟಲೆ ಸಂಶೋಧನೆ ಮಾಡಿ ಅಪಾರ ಖಚಿತತೆಯಿಂದ ಸಾಹಿತ್ಯ ಕೃತಿಗಳನ್ನು ರಚಿಸುವ ಬೈರಪ್ಪನವರು, ಈ ಕಾಮಾಕ್ಯ ದೇವಸ್ಥಾನಕ್ಕೂ ಹೋಗಿಬಂದಿದ್ದಾರೆ. ಹಾಗಿದ್ದ ಮೇಲೆ, ಮುಟ್ಟಿನ ಕುರಿತು ಇವರು ಯಾವ ರೀತಿಯ ಅನುಸಂಧಾನ ನಡೆಸಿದ್ದಾರೆ? ಎಂದು ಅಚ್ಚರಿಯಾಗುತ್ತದೆ.

ಎಪ್ಪತ್ತರ ದಶಕದ ಎರಡನೇ ಭಾಗದಲ್ಲಿ ಸ್ಯಾನಿಟರಿ ಪ್ಯಾಡ್‍ಗಳು ಚಲಾವಣೆಗೆ ಬಂದಾಗ ಮಹಿಳೆಯರ ನಡುವೆ ಮುಟ್ಟು ಮೌನ ಮುರಿದು ‘ಗುಸುಗುಸು’ ಮಾತಿನ ಅಂಗಳಕ್ಕೆ ಬಂದು ನಿಂತಿತ್ತು. ಸ್ಯಾನಿಟರಿ ಪ್ಯಾಡ್‍ಗಳ ಜಾಹಿರಾತು ಟಿವಿ ಪರದೆಯಲ್ಲಿ ಮೂಡತೊಡಗಿದಾಗ ಗಂಡಸರೂ ಈ ಕುರಿತು ಗುಸುಗುಸು ಮಾಡತೊಡಗಿದರು. ಸ್ಯಾನಿಟರಿ ಪ್ಯಾಡ್ ಕಂಪೆನಿಗಳು ತಮ್ಮ ಮಾರುಕಟ್ಟೆಯ ವಿಸ್ತರಣೆಗಾಗಿ ಹದಿವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ಋತುಸ್ರಾವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಆರಂಭಿಸಿದವು. ಹೀಗೆ ಮಾರುಕಟ್ಟೆಯ ಕಾರಣ ಮುಟ್ಟಿನ ಮಾತು ಕೌಟುಂಬಿಕ ಮತ್ತು ಸಾಮಾಜಿಕ ಸ್ಥಳಗಳಲ್ಲಿ ವಿಸ್ತರಣೆಯಾಯಿತು. ಆದರೆ ಸಾಂಸ್ಕøತಿಕವಾಗಿ ಮುಟ್ಟು ಯಾವತ್ತಿಗೂ ಮುಕ್ತವಾಗಿ ಹಾಗೂ ಗುಪ್ತವಾಗಿ ಮಾತಿನಲ್ಲಿ, ಚರ್ಚೆಯಲ್ಲಿ, ಆಚರಣೆಯಲ್ಲಿ ಹಾಗೂ ವಿಜೃಂಭಣೆಯಲ್ಲಿ ವಸ್ತುವಾಗಿದ್ದುಕೊಂಡೇ ಇದೆ.

ಇತ್ತೀಚೆಗೆ ಶಬರಿಮಲೆ ನಿಮಿತ್ತ ಮುಟ್ಟು ಸಾರ್ವಜನಿಕ ಚರ್ಚೆಗೆ ಹೆಚ್ಚೆಚ್ಚು ತೆರೆದುಕೊಂಡು, ಮುಟ್ಟನ್ನು ಗಲೀಜು ಎಂದು ಜರೆಯುವವರ ಮನಸ್ಸಿನ ಕೊಳಕನ್ನೆಲ್ಲ ಹೊರಗೆ ಚೆಲ್ಲುತ್ತಿದೆ. 2015ರ ನವೆಂಬರ್‌ನಲ್ಲಿ ಶಬರಿಮಲೆ ದೇವಸ್ಥಾನದ ಮುಖ್ಯಸ್ಥ ಗೋಪಾಲಕೃಷ್ಣನ್, ದೇವಸ್ಥಾನಕ್ಕೆ ಬರುವ ಮಹಿಳೆಯರನ್ನು ಸ್ಕ್ಯಾನ್ ಮಾಡುವ ಯಂತ್ರ ಸ್ಥಾಪಿಸುವ ಕುರಿತು ಮಾತನಾಡಿದಾಗ, ಸಿಟ್ಟಿಗೆದ್ದ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಕಿತಾ ಅರೋರಾ ‘ಹ್ಯಾಪಿ ಟು ಬ್ಲೀಡ್’ ಎಂಬ ಆಂದೋಲನವನ್ನೇ ಹುಟ್ಟು ಹಾಕಿದರು. ಸ್ಯಾನಿಟರಿ ಪ್ಯಾಡ್‍ಗಳನ್ನು ಹಿಡಿದುಕೊಂಡ ಯುವತಿಯರು ತಮ್ಮ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿ, ಮುಟ್ಟಿಗೆ ಸಂಬಂಧಿಸಿದ ಮೂಢ ಆಚರಣೆಗಳು ಹಾಗೂ ವಿಧಿ ನಿಷೇಧಗಳನ್ನು ವಿರೋಧಿಸಿದರು.

2017ರಲ್ಲಿ ಸ್ಯಾನಿಟರಿ ಪ್ಯಾಡ್‍ಗಳ ಮೇಲೆ ಶೇ.12ರಷ್ಟು ತೆರಿಗೆ ಹೇರುವ ಕೇಂದ್ರ ಸರ್ಕಾರದ ಮೂರ್ಖ ಕ್ರಮವು ‘ರಕ್ತಕ್ಕೆ ತೆರಿಗೆ’ ಎಂಬ ತೆರಿಗೆ ವಿರೋಧಿ ಚಳವಳಿಯನ್ನು ಹುಟ್ಟುಹಾಕಿತು; 2018ರಲ್ಲಿ ತೆರಿಗೆ ರದ್ಧತಿಗೆ ಕಾರಣವಾಯಿತು. 2018ರ ಸೆಪ್ಟೆಂಬರ್‍ನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಎಲ್ಲ ಮಹಿಳೆಯರಿಗೂ ಮುಕ್ತ ಅವಕಾಶ ಕೊಡಬೇಕು ಎನ್ನುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೆಣ್ಣನ್ನು ಕುರಿತಾಗಿ ಈ ದೇಶಕ್ಕೆ ಇರುವ ಕೊಳಕು ನಿಲುವುಗಳನ್ನೆಲ್ಲ ಬೀದಿಗೆ ಚೆಲ್ಲಿತು. ಹೆಣ್ಣಿನಿಂದಲೇ ಹುಟ್ಟಿದ ದೇವರು ಹೆಣ್ಣಿನಿಂದಲೇ ಅಪವಿತ್ರನಾಗುತ್ತಾನೆ ಎನ್ನುವ ಭಕ್ತ ಗಣದ ಕುರುಡುತನವು ಭಾರತದಲ್ಲಿ ಮಹಿಳೆಯರ ಸ್ಥಿತಿಗತಿಯನ್ನೂ ಅನಾವರಣಗೊಳಿಸಿತು.

ಆದರೆ, ಈ ಕಾರಣಗಳು ಮುಟ್ಟಿನ ಕುರಿತಾದ ಚರ್ಚೆಯನ್ನು ಹೆಚ್ಚಿಸಿವೆ. ಜನರಲ್ಲಿ ಈ ಕುರಿತ ತಿಳಿವಳಿಕೆಯು ಹೆಚ್ಚಾಗುತ್ತಾ ಬಂದಿದೆ. ಮುಟ್ಟಿನ ಸಂದರ್ಭದ ಅಗತ್ಯಗಳ ಕುರಿತು, ಆರೋಗ್ಯದ ಕುರಿತು ಸಾಕಷ್ಟು ಧನಾತ್ಮಕ ಚಿಂತನೆಗಳು, ಬೆಳವಣಿಗೆಗಳು ನಡೆದಿವೆ. ಬರಹಗಾರರು, ಕಾರ್ಯಕರ್ತರು, ಸಂಘಟನೆಗಳು ಮುಟ್ಟಿನ ಕುರಿತು ಆರೋಗ್ಯಕರವಾಗಿ ಸ್ಪಂದಿಸಿದ್ದಾರೆ. ಸ್ವತಂತ್ರ ಯುಟ್ಯೂಬ್ ಚಾನೆಲ್‍ಗಳು ‘ಮುಟ್ಟು ಎಂದರೇನು’ ಎಂಬ ಸಾರ್ವಜನಿಕ ಪ್ರಶ್ನೋತ್ತರ ಕಾರ್ಯಕ್ರಮಗಳನ್ನು ನಡೆಸಿವೆ. ಮಂಗಳೂರಿನ ಶ್ರೀನಿವಾಸ ಕಾರ್ಕಳ ಅವರು ದಶಕಕ್ಕೂ ಹಿಂದೆಯೇ ‘ಮುಟ್ಟು ಮುಟ್ಟೇಂದೇಕೆ ಹೀಯಾಳಿಸುವಿರಿ?/ಮುಟ್ಟಿನಿಂದಲ್ಲವೇ ನಮ್ಮೆಲ್ಲ ಹುಟ್ಟು/ ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು..’ ಎಂದು ಬರೆದ ಹಾಡು ಅಸಂಖ್ಯಾತ ಮಹಿಳಾ ತರಬೇತಿಗಳಲ್ಲಿ, ಕಾರ್ಯಕ್ರಮಗಳಲ್ಲಿ ಮುಟ್ಟಿನ ಕುರಿತಾದ ಮುಜುಗರವನ್ನು ಹೊಡೆದೋಡಿಸಿದೆ.

ಬೆಂಗಳೂರಿನಲ್ಲಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಯುವ ಜೋಡಿಯೊಂದು ಮುಟ್ಟಿನ ಕುರಿತು ತಿಳಿವಳಿಕೆ ಹೆಚ್ಚಿಸಲು ತಮ್ಮ ಕೆಲಸಕ್ಕೆ ತಿಲಾಂಜಲಿ ಕೊಟ್ಟು ಸಖೀಭವ ಎಂಬ ಸಂಸ್ಥೆಯೊಂದನ್ನು ಸ್ಥಾಪಿಸಿ, ‘ಸುಸ್ಥಿರ ಮುಟ್ಟಿನ ಆರೋಗ್ಯ’ ಕುರಿತು ಆಂದೋಲನವನ್ನೇ ನಡೆಸಿದೆ. ಈ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿರುವ ಜ್ಯೋತಿ ಇಟ್ನಾಳ್ ಮುಟ್ಟಿನ ಆಚರಣೆಗಳು ಹಾಗೂ ವಿಧಿ ನಿಷೇಧಗಳ ಕುರಿತಾಗಿಯೇ ಪಿಎಚ್‍ಡಿ ಸಂಶೋಧನೆಗೆ ಕೈಹಾಕಿದ್ದಾರೆ.

ಕಳೆದ ವರ್ಷ ಭೀಕರ ಪ್ರವಾಹ ಮತ್ತು ಭೂಕುಸಿತಕ್ಕೆ ತುತ್ತಾಗಿದ್ದ ಕೇರಳದಲ್ಲಿ ಮುಟ್ಟಾದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‍ನ ಬದಲಿಗೆ ಮುಟ್ಟಿನ ಬಟ್ಟಲುಗಳನ್ನು ಒದಗಿಸುವ ಕ್ರಾಂತಿಕಾರಿ ಕ್ರಮವನ್ನು ಅನುಸರಿಸಲಾಯಿತು. ಇದೇ ಮಾರ್ಗವನ್ನು ಅನುಸರಿಸಿ ಕಳೆದ ತಿಂಗಳು ಕರ್ನಾಟಕದ ಪ್ರವಾಹದ ಸಂದರ್ಭದಲ್ಲಿ ಶಿವಲೀಲಾ, ಸಂಜ್ಯೋತಿ, ದೀಪಾ ಮತ್ತು ಜ್ಯೋತಿಯವರ ಮುಂದಾಳತ್ವದಲ್ಲಿ ಸಾವಿರಾರು ಮುಟ್ಟಿನ ಬಟ್ಟಲುಗಳು ಪ್ರವಾಹಸಂತ್ರಸ್ತ ಮಹಿಳೆಯರಿಗೆ ಉಚಿತವಾಗಿ ವಿತರಿಸಿ, ಅದರ ಬಳಕೆಯ ಕುರಿತು ತಿಳಿಸಿಕೊಡಲಾಗಿದೆ. ಮುಟ್ಟಿನ ಕುರಿತು ವೈಜ್ಞಾನಿಕ ಮಾಹಿತಿ, ಆಚರಣೆಗಳು ಇತ್ಯಾದಿಗಳ ಜೊತೆಗೆ, ಗಂಡಸರು ಮುಟ್ಟನ್ನು ಎದುರುಗೊಂಡ ಬಗೆಯೂ ಸಾರ್ವಜನಿಕ ಚರ್ಚೆಯ ವಲಯ ಪ್ರವೇಶಿಸಿರುವದು ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ.

ಹೀಗೆ ಒಂದು ಕಡೆ ಮುಟ್ಟಿನ ಕುರಿತಾದ ಸಂಕುಚಿತತೆಯ ನೆರಳಿನಲ್ಲೇ ಮುಟ್ಟಿನ ಕುರಿತಾದ ಅರಿವು ಹೆಚ್ಚಿಸುವ ಬೆಳಕು ಮೂಡುತ್ತಿರುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದ್ಭುತವಾದ ಲೇಖನ. ಈ ಲೇಖನವನ್ನು “ಡಾಬಸ್ ಪೇಟೆ ವಾಯ್ಸ್” ಕನ್ನಡ ಮಾಸಪತ್ರಿಕೆಯ ನವೆಂಬರ್ ಸಂಚಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...