Homeಕರ್ನಾಟಕಮುಟ್ಟಿನ ಬೆಳಕು : ಸತ್ಯಾ ಎಸ್

ಮುಟ್ಟಿನ ಬೆಳಕು : ಸತ್ಯಾ ಎಸ್

- Advertisement -
- Advertisement -

‘ಮುಟ್ಟಿನಿಂದ ಹುಟ್ಟು’ ಎನ್ನುವ ಸರಳ ಸತ್ಯ ಎಲ್ಲರಿಗೂ ಬೆಳಕಿನಷ್ಟು ನಿಚ್ಚಳವಾಗಿದ್ದರೂ, ಮುಟ್ಟನ್ನು ಮೈಲಿಗೆ ಎನ್ನುವಷ್ಟು ದ್ರಾಷ್ಟ್ಯ ಮನುಷ್ಯ ಕುಲವನ್ನು ಕಾಡುತ್ತಿರುವುದು ಗಂಭೀರವಾದ ವಿಷಯ. ತನ್ನ ಹುಟ್ಟಿಗೆ ಕಾರಣವಾದ, ನೈಸರ್ಗಿಕವಾದ, ವೈಜ್ಞಾನಿಕವಾದ ಕ್ರಿಯೆಯನ್ನೇ ಮನುಷ್ಯ ತನ್ನ ಅಹಂಕಾರ, ಅಧಿಕಾರ ಲಾಲಸೆ, ದೊಡ್ಡಸ್ತಿಕೆಯ ಅಸ್ತ್ರವಾಗಿ ಬಳಸುತ್ತಿರುವುದು ಮನುಷ್ಯ ಕುಲ ಇನ್ನೂ ಎಷ್ಟೊಂದು ಅವೈಜ್ಞಾನಿಕವಾಗಿ, ಅವೈಚಾರಿಕಾಗಿ ಹಾಗೂ ಅನೈಸರ್ಗಿಕವಾಗಿ ಆಲೋಚಿಸುತ್ತಿದೆ, ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಅಪ್ರಜಾಸತ್ತಾತ್ಮಕವಾದ ದಸರಾ ಆಚರಣೆಯನ್ನು ಉದ್ಘಾಟಿಸಿದ ಪುರೋಗಾಮಿ ಚಿಂತನೆಯ ಲೇಖಕ ಎಸ್ ಎಲ್ ಬೈರಪ್ಪನವರು ಮುಟ್ಟಾಗುವ ಹೆಂಗಸರು ದೇವಸ್ಥಾನಕ್ಕೆ ಹೋಗುವಂತಿಲ್ಲ, ಆಫೀಸಿಗೆ ಹೋಗಬಹುದು ಎನ್ನುವ ಮೂಲಕ ಬಹುಪಾಲು ಮನುಷ್ಯರ ಹಿಮ್ಮುಖದ ಚಲನೆಯನ್ನು ಮತ್ತೆ ಪ್ರದರ್ಶಿಸಿದ್ದಾರೆ. ಹೆಣ್ಣನ್ನು ನಿಯಂತ್ರಿಸುವ ಮತ್ತು ಬಳಸಿಕೊಳ್ಳುವ ಪಿತೃಪ್ರಧಾನ ಹಾಗೂ ಪಾಳೇಗಾರಿ ಮನೋಭಾವವನ್ನು ಯಾವ ಹಿಂಜರಿಕೆ, ಸಂಕೋಚವಿಲ್ಲದೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ನೀಲಾಂಚಲದಲ್ಲಿರುವ, ಫಲವಂತಿಕೆಯ ಸ್ವರೂಪ ಎಂದು ಹೆಸರಾದ ದೇವಸ್ಥಾನ, ಕಾಮಾಕ್ಯ ದೇವಿಯ ದೇವಸ್ಥಾನ. ಗರ್ಭಾಶಯ ಆಕೃತಿಯ ಗರ್ಭಗೃಹ, ಯೋನಿ ರೂಪದ ದೇವತೆ ಮತ್ತು ನಸುಗೆಂಪು ಬಣ್ಣದ ಯೋನಿಯಿಂದ ಸ್ರವಿಸುವ ನೀರು- ಇವು ಆ ದೇವಾಲಯದ ಮುಖ್ಯಾಂಶಗಳು. ತಮ್ಮ ಒಂದೊಂದು ಕಾದಂಬರಿಗೂ ವರ್ಷಾನುಗಟ್ಟಲೆ ಸಂಶೋಧನೆ ಮಾಡಿ ಅಪಾರ ಖಚಿತತೆಯಿಂದ ಸಾಹಿತ್ಯ ಕೃತಿಗಳನ್ನು ರಚಿಸುವ ಬೈರಪ್ಪನವರು, ಈ ಕಾಮಾಕ್ಯ ದೇವಸ್ಥಾನಕ್ಕೂ ಹೋಗಿಬಂದಿದ್ದಾರೆ. ಹಾಗಿದ್ದ ಮೇಲೆ, ಮುಟ್ಟಿನ ಕುರಿತು ಇವರು ಯಾವ ರೀತಿಯ ಅನುಸಂಧಾನ ನಡೆಸಿದ್ದಾರೆ? ಎಂದು ಅಚ್ಚರಿಯಾಗುತ್ತದೆ.

ಎಪ್ಪತ್ತರ ದಶಕದ ಎರಡನೇ ಭಾಗದಲ್ಲಿ ಸ್ಯಾನಿಟರಿ ಪ್ಯಾಡ್‍ಗಳು ಚಲಾವಣೆಗೆ ಬಂದಾಗ ಮಹಿಳೆಯರ ನಡುವೆ ಮುಟ್ಟು ಮೌನ ಮುರಿದು ‘ಗುಸುಗುಸು’ ಮಾತಿನ ಅಂಗಳಕ್ಕೆ ಬಂದು ನಿಂತಿತ್ತು. ಸ್ಯಾನಿಟರಿ ಪ್ಯಾಡ್‍ಗಳ ಜಾಹಿರಾತು ಟಿವಿ ಪರದೆಯಲ್ಲಿ ಮೂಡತೊಡಗಿದಾಗ ಗಂಡಸರೂ ಈ ಕುರಿತು ಗುಸುಗುಸು ಮಾಡತೊಡಗಿದರು. ಸ್ಯಾನಿಟರಿ ಪ್ಯಾಡ್ ಕಂಪೆನಿಗಳು ತಮ್ಮ ಮಾರುಕಟ್ಟೆಯ ವಿಸ್ತರಣೆಗಾಗಿ ಹದಿವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ಋತುಸ್ರಾವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಆರಂಭಿಸಿದವು. ಹೀಗೆ ಮಾರುಕಟ್ಟೆಯ ಕಾರಣ ಮುಟ್ಟಿನ ಮಾತು ಕೌಟುಂಬಿಕ ಮತ್ತು ಸಾಮಾಜಿಕ ಸ್ಥಳಗಳಲ್ಲಿ ವಿಸ್ತರಣೆಯಾಯಿತು. ಆದರೆ ಸಾಂಸ್ಕøತಿಕವಾಗಿ ಮುಟ್ಟು ಯಾವತ್ತಿಗೂ ಮುಕ್ತವಾಗಿ ಹಾಗೂ ಗುಪ್ತವಾಗಿ ಮಾತಿನಲ್ಲಿ, ಚರ್ಚೆಯಲ್ಲಿ, ಆಚರಣೆಯಲ್ಲಿ ಹಾಗೂ ವಿಜೃಂಭಣೆಯಲ್ಲಿ ವಸ್ತುವಾಗಿದ್ದುಕೊಂಡೇ ಇದೆ.

ಇತ್ತೀಚೆಗೆ ಶಬರಿಮಲೆ ನಿಮಿತ್ತ ಮುಟ್ಟು ಸಾರ್ವಜನಿಕ ಚರ್ಚೆಗೆ ಹೆಚ್ಚೆಚ್ಚು ತೆರೆದುಕೊಂಡು, ಮುಟ್ಟನ್ನು ಗಲೀಜು ಎಂದು ಜರೆಯುವವರ ಮನಸ್ಸಿನ ಕೊಳಕನ್ನೆಲ್ಲ ಹೊರಗೆ ಚೆಲ್ಲುತ್ತಿದೆ. 2015ರ ನವೆಂಬರ್‌ನಲ್ಲಿ ಶಬರಿಮಲೆ ದೇವಸ್ಥಾನದ ಮುಖ್ಯಸ್ಥ ಗೋಪಾಲಕೃಷ್ಣನ್, ದೇವಸ್ಥಾನಕ್ಕೆ ಬರುವ ಮಹಿಳೆಯರನ್ನು ಸ್ಕ್ಯಾನ್ ಮಾಡುವ ಯಂತ್ರ ಸ್ಥಾಪಿಸುವ ಕುರಿತು ಮಾತನಾಡಿದಾಗ, ಸಿಟ್ಟಿಗೆದ್ದ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಕಿತಾ ಅರೋರಾ ‘ಹ್ಯಾಪಿ ಟು ಬ್ಲೀಡ್’ ಎಂಬ ಆಂದೋಲನವನ್ನೇ ಹುಟ್ಟು ಹಾಕಿದರು. ಸ್ಯಾನಿಟರಿ ಪ್ಯಾಡ್‍ಗಳನ್ನು ಹಿಡಿದುಕೊಂಡ ಯುವತಿಯರು ತಮ್ಮ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿ, ಮುಟ್ಟಿಗೆ ಸಂಬಂಧಿಸಿದ ಮೂಢ ಆಚರಣೆಗಳು ಹಾಗೂ ವಿಧಿ ನಿಷೇಧಗಳನ್ನು ವಿರೋಧಿಸಿದರು.

2017ರಲ್ಲಿ ಸ್ಯಾನಿಟರಿ ಪ್ಯಾಡ್‍ಗಳ ಮೇಲೆ ಶೇ.12ರಷ್ಟು ತೆರಿಗೆ ಹೇರುವ ಕೇಂದ್ರ ಸರ್ಕಾರದ ಮೂರ್ಖ ಕ್ರಮವು ‘ರಕ್ತಕ್ಕೆ ತೆರಿಗೆ’ ಎಂಬ ತೆರಿಗೆ ವಿರೋಧಿ ಚಳವಳಿಯನ್ನು ಹುಟ್ಟುಹಾಕಿತು; 2018ರಲ್ಲಿ ತೆರಿಗೆ ರದ್ಧತಿಗೆ ಕಾರಣವಾಯಿತು. 2018ರ ಸೆಪ್ಟೆಂಬರ್‍ನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಎಲ್ಲ ಮಹಿಳೆಯರಿಗೂ ಮುಕ್ತ ಅವಕಾಶ ಕೊಡಬೇಕು ಎನ್ನುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೆಣ್ಣನ್ನು ಕುರಿತಾಗಿ ಈ ದೇಶಕ್ಕೆ ಇರುವ ಕೊಳಕು ನಿಲುವುಗಳನ್ನೆಲ್ಲ ಬೀದಿಗೆ ಚೆಲ್ಲಿತು. ಹೆಣ್ಣಿನಿಂದಲೇ ಹುಟ್ಟಿದ ದೇವರು ಹೆಣ್ಣಿನಿಂದಲೇ ಅಪವಿತ್ರನಾಗುತ್ತಾನೆ ಎನ್ನುವ ಭಕ್ತ ಗಣದ ಕುರುಡುತನವು ಭಾರತದಲ್ಲಿ ಮಹಿಳೆಯರ ಸ್ಥಿತಿಗತಿಯನ್ನೂ ಅನಾವರಣಗೊಳಿಸಿತು.

ಆದರೆ, ಈ ಕಾರಣಗಳು ಮುಟ್ಟಿನ ಕುರಿತಾದ ಚರ್ಚೆಯನ್ನು ಹೆಚ್ಚಿಸಿವೆ. ಜನರಲ್ಲಿ ಈ ಕುರಿತ ತಿಳಿವಳಿಕೆಯು ಹೆಚ್ಚಾಗುತ್ತಾ ಬಂದಿದೆ. ಮುಟ್ಟಿನ ಸಂದರ್ಭದ ಅಗತ್ಯಗಳ ಕುರಿತು, ಆರೋಗ್ಯದ ಕುರಿತು ಸಾಕಷ್ಟು ಧನಾತ್ಮಕ ಚಿಂತನೆಗಳು, ಬೆಳವಣಿಗೆಗಳು ನಡೆದಿವೆ. ಬರಹಗಾರರು, ಕಾರ್ಯಕರ್ತರು, ಸಂಘಟನೆಗಳು ಮುಟ್ಟಿನ ಕುರಿತು ಆರೋಗ್ಯಕರವಾಗಿ ಸ್ಪಂದಿಸಿದ್ದಾರೆ. ಸ್ವತಂತ್ರ ಯುಟ್ಯೂಬ್ ಚಾನೆಲ್‍ಗಳು ‘ಮುಟ್ಟು ಎಂದರೇನು’ ಎಂಬ ಸಾರ್ವಜನಿಕ ಪ್ರಶ್ನೋತ್ತರ ಕಾರ್ಯಕ್ರಮಗಳನ್ನು ನಡೆಸಿವೆ. ಮಂಗಳೂರಿನ ಶ್ರೀನಿವಾಸ ಕಾರ್ಕಳ ಅವರು ದಶಕಕ್ಕೂ ಹಿಂದೆಯೇ ‘ಮುಟ್ಟು ಮುಟ್ಟೇಂದೇಕೆ ಹೀಯಾಳಿಸುವಿರಿ?/ಮುಟ್ಟಿನಿಂದಲ್ಲವೇ ನಮ್ಮೆಲ್ಲ ಹುಟ್ಟು/ ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು..’ ಎಂದು ಬರೆದ ಹಾಡು ಅಸಂಖ್ಯಾತ ಮಹಿಳಾ ತರಬೇತಿಗಳಲ್ಲಿ, ಕಾರ್ಯಕ್ರಮಗಳಲ್ಲಿ ಮುಟ್ಟಿನ ಕುರಿತಾದ ಮುಜುಗರವನ್ನು ಹೊಡೆದೋಡಿಸಿದೆ.

ಬೆಂಗಳೂರಿನಲ್ಲಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಯುವ ಜೋಡಿಯೊಂದು ಮುಟ್ಟಿನ ಕುರಿತು ತಿಳಿವಳಿಕೆ ಹೆಚ್ಚಿಸಲು ತಮ್ಮ ಕೆಲಸಕ್ಕೆ ತಿಲಾಂಜಲಿ ಕೊಟ್ಟು ಸಖೀಭವ ಎಂಬ ಸಂಸ್ಥೆಯೊಂದನ್ನು ಸ್ಥಾಪಿಸಿ, ‘ಸುಸ್ಥಿರ ಮುಟ್ಟಿನ ಆರೋಗ್ಯ’ ಕುರಿತು ಆಂದೋಲನವನ್ನೇ ನಡೆಸಿದೆ. ಈ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿರುವ ಜ್ಯೋತಿ ಇಟ್ನಾಳ್ ಮುಟ್ಟಿನ ಆಚರಣೆಗಳು ಹಾಗೂ ವಿಧಿ ನಿಷೇಧಗಳ ಕುರಿತಾಗಿಯೇ ಪಿಎಚ್‍ಡಿ ಸಂಶೋಧನೆಗೆ ಕೈಹಾಕಿದ್ದಾರೆ.

ಕಳೆದ ವರ್ಷ ಭೀಕರ ಪ್ರವಾಹ ಮತ್ತು ಭೂಕುಸಿತಕ್ಕೆ ತುತ್ತಾಗಿದ್ದ ಕೇರಳದಲ್ಲಿ ಮುಟ್ಟಾದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‍ನ ಬದಲಿಗೆ ಮುಟ್ಟಿನ ಬಟ್ಟಲುಗಳನ್ನು ಒದಗಿಸುವ ಕ್ರಾಂತಿಕಾರಿ ಕ್ರಮವನ್ನು ಅನುಸರಿಸಲಾಯಿತು. ಇದೇ ಮಾರ್ಗವನ್ನು ಅನುಸರಿಸಿ ಕಳೆದ ತಿಂಗಳು ಕರ್ನಾಟಕದ ಪ್ರವಾಹದ ಸಂದರ್ಭದಲ್ಲಿ ಶಿವಲೀಲಾ, ಸಂಜ್ಯೋತಿ, ದೀಪಾ ಮತ್ತು ಜ್ಯೋತಿಯವರ ಮುಂದಾಳತ್ವದಲ್ಲಿ ಸಾವಿರಾರು ಮುಟ್ಟಿನ ಬಟ್ಟಲುಗಳು ಪ್ರವಾಹಸಂತ್ರಸ್ತ ಮಹಿಳೆಯರಿಗೆ ಉಚಿತವಾಗಿ ವಿತರಿಸಿ, ಅದರ ಬಳಕೆಯ ಕುರಿತು ತಿಳಿಸಿಕೊಡಲಾಗಿದೆ. ಮುಟ್ಟಿನ ಕುರಿತು ವೈಜ್ಞಾನಿಕ ಮಾಹಿತಿ, ಆಚರಣೆಗಳು ಇತ್ಯಾದಿಗಳ ಜೊತೆಗೆ, ಗಂಡಸರು ಮುಟ್ಟನ್ನು ಎದುರುಗೊಂಡ ಬಗೆಯೂ ಸಾರ್ವಜನಿಕ ಚರ್ಚೆಯ ವಲಯ ಪ್ರವೇಶಿಸಿರುವದು ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ.

ಹೀಗೆ ಒಂದು ಕಡೆ ಮುಟ್ಟಿನ ಕುರಿತಾದ ಸಂಕುಚಿತತೆಯ ನೆರಳಿನಲ್ಲೇ ಮುಟ್ಟಿನ ಕುರಿತಾದ ಅರಿವು ಹೆಚ್ಚಿಸುವ ಬೆಳಕು ಮೂಡುತ್ತಿರುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದ್ಭುತವಾದ ಲೇಖನ. ಈ ಲೇಖನವನ್ನು “ಡಾಬಸ್ ಪೇಟೆ ವಾಯ್ಸ್” ಕನ್ನಡ ಮಾಸಪತ್ರಿಕೆಯ ನವೆಂಬರ್ ಸಂಚಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...