Homeಕರ್ನಾಟಕಮುಟ್ಟಿನ ಬೆಳಕು : ಸತ್ಯಾ ಎಸ್

ಮುಟ್ಟಿನ ಬೆಳಕು : ಸತ್ಯಾ ಎಸ್

- Advertisement -
- Advertisement -

‘ಮುಟ್ಟಿನಿಂದ ಹುಟ್ಟು’ ಎನ್ನುವ ಸರಳ ಸತ್ಯ ಎಲ್ಲರಿಗೂ ಬೆಳಕಿನಷ್ಟು ನಿಚ್ಚಳವಾಗಿದ್ದರೂ, ಮುಟ್ಟನ್ನು ಮೈಲಿಗೆ ಎನ್ನುವಷ್ಟು ದ್ರಾಷ್ಟ್ಯ ಮನುಷ್ಯ ಕುಲವನ್ನು ಕಾಡುತ್ತಿರುವುದು ಗಂಭೀರವಾದ ವಿಷಯ. ತನ್ನ ಹುಟ್ಟಿಗೆ ಕಾರಣವಾದ, ನೈಸರ್ಗಿಕವಾದ, ವೈಜ್ಞಾನಿಕವಾದ ಕ್ರಿಯೆಯನ್ನೇ ಮನುಷ್ಯ ತನ್ನ ಅಹಂಕಾರ, ಅಧಿಕಾರ ಲಾಲಸೆ, ದೊಡ್ಡಸ್ತಿಕೆಯ ಅಸ್ತ್ರವಾಗಿ ಬಳಸುತ್ತಿರುವುದು ಮನುಷ್ಯ ಕುಲ ಇನ್ನೂ ಎಷ್ಟೊಂದು ಅವೈಜ್ಞಾನಿಕವಾಗಿ, ಅವೈಚಾರಿಕಾಗಿ ಹಾಗೂ ಅನೈಸರ್ಗಿಕವಾಗಿ ಆಲೋಚಿಸುತ್ತಿದೆ, ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಅಪ್ರಜಾಸತ್ತಾತ್ಮಕವಾದ ದಸರಾ ಆಚರಣೆಯನ್ನು ಉದ್ಘಾಟಿಸಿದ ಪುರೋಗಾಮಿ ಚಿಂತನೆಯ ಲೇಖಕ ಎಸ್ ಎಲ್ ಬೈರಪ್ಪನವರು ಮುಟ್ಟಾಗುವ ಹೆಂಗಸರು ದೇವಸ್ಥಾನಕ್ಕೆ ಹೋಗುವಂತಿಲ್ಲ, ಆಫೀಸಿಗೆ ಹೋಗಬಹುದು ಎನ್ನುವ ಮೂಲಕ ಬಹುಪಾಲು ಮನುಷ್ಯರ ಹಿಮ್ಮುಖದ ಚಲನೆಯನ್ನು ಮತ್ತೆ ಪ್ರದರ್ಶಿಸಿದ್ದಾರೆ. ಹೆಣ್ಣನ್ನು ನಿಯಂತ್ರಿಸುವ ಮತ್ತು ಬಳಸಿಕೊಳ್ಳುವ ಪಿತೃಪ್ರಧಾನ ಹಾಗೂ ಪಾಳೇಗಾರಿ ಮನೋಭಾವವನ್ನು ಯಾವ ಹಿಂಜರಿಕೆ, ಸಂಕೋಚವಿಲ್ಲದೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ನೀಲಾಂಚಲದಲ್ಲಿರುವ, ಫಲವಂತಿಕೆಯ ಸ್ವರೂಪ ಎಂದು ಹೆಸರಾದ ದೇವಸ್ಥಾನ, ಕಾಮಾಕ್ಯ ದೇವಿಯ ದೇವಸ್ಥಾನ. ಗರ್ಭಾಶಯ ಆಕೃತಿಯ ಗರ್ಭಗೃಹ, ಯೋನಿ ರೂಪದ ದೇವತೆ ಮತ್ತು ನಸುಗೆಂಪು ಬಣ್ಣದ ಯೋನಿಯಿಂದ ಸ್ರವಿಸುವ ನೀರು- ಇವು ಆ ದೇವಾಲಯದ ಮುಖ್ಯಾಂಶಗಳು. ತಮ್ಮ ಒಂದೊಂದು ಕಾದಂಬರಿಗೂ ವರ್ಷಾನುಗಟ್ಟಲೆ ಸಂಶೋಧನೆ ಮಾಡಿ ಅಪಾರ ಖಚಿತತೆಯಿಂದ ಸಾಹಿತ್ಯ ಕೃತಿಗಳನ್ನು ರಚಿಸುವ ಬೈರಪ್ಪನವರು, ಈ ಕಾಮಾಕ್ಯ ದೇವಸ್ಥಾನಕ್ಕೂ ಹೋಗಿಬಂದಿದ್ದಾರೆ. ಹಾಗಿದ್ದ ಮೇಲೆ, ಮುಟ್ಟಿನ ಕುರಿತು ಇವರು ಯಾವ ರೀತಿಯ ಅನುಸಂಧಾನ ನಡೆಸಿದ್ದಾರೆ? ಎಂದು ಅಚ್ಚರಿಯಾಗುತ್ತದೆ.

ಎಪ್ಪತ್ತರ ದಶಕದ ಎರಡನೇ ಭಾಗದಲ್ಲಿ ಸ್ಯಾನಿಟರಿ ಪ್ಯಾಡ್‍ಗಳು ಚಲಾವಣೆಗೆ ಬಂದಾಗ ಮಹಿಳೆಯರ ನಡುವೆ ಮುಟ್ಟು ಮೌನ ಮುರಿದು ‘ಗುಸುಗುಸು’ ಮಾತಿನ ಅಂಗಳಕ್ಕೆ ಬಂದು ನಿಂತಿತ್ತು. ಸ್ಯಾನಿಟರಿ ಪ್ಯಾಡ್‍ಗಳ ಜಾಹಿರಾತು ಟಿವಿ ಪರದೆಯಲ್ಲಿ ಮೂಡತೊಡಗಿದಾಗ ಗಂಡಸರೂ ಈ ಕುರಿತು ಗುಸುಗುಸು ಮಾಡತೊಡಗಿದರು. ಸ್ಯಾನಿಟರಿ ಪ್ಯಾಡ್ ಕಂಪೆನಿಗಳು ತಮ್ಮ ಮಾರುಕಟ್ಟೆಯ ವಿಸ್ತರಣೆಗಾಗಿ ಹದಿವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ಋತುಸ್ರಾವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಆರಂಭಿಸಿದವು. ಹೀಗೆ ಮಾರುಕಟ್ಟೆಯ ಕಾರಣ ಮುಟ್ಟಿನ ಮಾತು ಕೌಟುಂಬಿಕ ಮತ್ತು ಸಾಮಾಜಿಕ ಸ್ಥಳಗಳಲ್ಲಿ ವಿಸ್ತರಣೆಯಾಯಿತು. ಆದರೆ ಸಾಂಸ್ಕøತಿಕವಾಗಿ ಮುಟ್ಟು ಯಾವತ್ತಿಗೂ ಮುಕ್ತವಾಗಿ ಹಾಗೂ ಗುಪ್ತವಾಗಿ ಮಾತಿನಲ್ಲಿ, ಚರ್ಚೆಯಲ್ಲಿ, ಆಚರಣೆಯಲ್ಲಿ ಹಾಗೂ ವಿಜೃಂಭಣೆಯಲ್ಲಿ ವಸ್ತುವಾಗಿದ್ದುಕೊಂಡೇ ಇದೆ.

ಇತ್ತೀಚೆಗೆ ಶಬರಿಮಲೆ ನಿಮಿತ್ತ ಮುಟ್ಟು ಸಾರ್ವಜನಿಕ ಚರ್ಚೆಗೆ ಹೆಚ್ಚೆಚ್ಚು ತೆರೆದುಕೊಂಡು, ಮುಟ್ಟನ್ನು ಗಲೀಜು ಎಂದು ಜರೆಯುವವರ ಮನಸ್ಸಿನ ಕೊಳಕನ್ನೆಲ್ಲ ಹೊರಗೆ ಚೆಲ್ಲುತ್ತಿದೆ. 2015ರ ನವೆಂಬರ್‌ನಲ್ಲಿ ಶಬರಿಮಲೆ ದೇವಸ್ಥಾನದ ಮುಖ್ಯಸ್ಥ ಗೋಪಾಲಕೃಷ್ಣನ್, ದೇವಸ್ಥಾನಕ್ಕೆ ಬರುವ ಮಹಿಳೆಯರನ್ನು ಸ್ಕ್ಯಾನ್ ಮಾಡುವ ಯಂತ್ರ ಸ್ಥಾಪಿಸುವ ಕುರಿತು ಮಾತನಾಡಿದಾಗ, ಸಿಟ್ಟಿಗೆದ್ದ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಕಿತಾ ಅರೋರಾ ‘ಹ್ಯಾಪಿ ಟು ಬ್ಲೀಡ್’ ಎಂಬ ಆಂದೋಲನವನ್ನೇ ಹುಟ್ಟು ಹಾಕಿದರು. ಸ್ಯಾನಿಟರಿ ಪ್ಯಾಡ್‍ಗಳನ್ನು ಹಿಡಿದುಕೊಂಡ ಯುವತಿಯರು ತಮ್ಮ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿ, ಮುಟ್ಟಿಗೆ ಸಂಬಂಧಿಸಿದ ಮೂಢ ಆಚರಣೆಗಳು ಹಾಗೂ ವಿಧಿ ನಿಷೇಧಗಳನ್ನು ವಿರೋಧಿಸಿದರು.

2017ರಲ್ಲಿ ಸ್ಯಾನಿಟರಿ ಪ್ಯಾಡ್‍ಗಳ ಮೇಲೆ ಶೇ.12ರಷ್ಟು ತೆರಿಗೆ ಹೇರುವ ಕೇಂದ್ರ ಸರ್ಕಾರದ ಮೂರ್ಖ ಕ್ರಮವು ‘ರಕ್ತಕ್ಕೆ ತೆರಿಗೆ’ ಎಂಬ ತೆರಿಗೆ ವಿರೋಧಿ ಚಳವಳಿಯನ್ನು ಹುಟ್ಟುಹಾಕಿತು; 2018ರಲ್ಲಿ ತೆರಿಗೆ ರದ್ಧತಿಗೆ ಕಾರಣವಾಯಿತು. 2018ರ ಸೆಪ್ಟೆಂಬರ್‍ನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಎಲ್ಲ ಮಹಿಳೆಯರಿಗೂ ಮುಕ್ತ ಅವಕಾಶ ಕೊಡಬೇಕು ಎನ್ನುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೆಣ್ಣನ್ನು ಕುರಿತಾಗಿ ಈ ದೇಶಕ್ಕೆ ಇರುವ ಕೊಳಕು ನಿಲುವುಗಳನ್ನೆಲ್ಲ ಬೀದಿಗೆ ಚೆಲ್ಲಿತು. ಹೆಣ್ಣಿನಿಂದಲೇ ಹುಟ್ಟಿದ ದೇವರು ಹೆಣ್ಣಿನಿಂದಲೇ ಅಪವಿತ್ರನಾಗುತ್ತಾನೆ ಎನ್ನುವ ಭಕ್ತ ಗಣದ ಕುರುಡುತನವು ಭಾರತದಲ್ಲಿ ಮಹಿಳೆಯರ ಸ್ಥಿತಿಗತಿಯನ್ನೂ ಅನಾವರಣಗೊಳಿಸಿತು.

ಆದರೆ, ಈ ಕಾರಣಗಳು ಮುಟ್ಟಿನ ಕುರಿತಾದ ಚರ್ಚೆಯನ್ನು ಹೆಚ್ಚಿಸಿವೆ. ಜನರಲ್ಲಿ ಈ ಕುರಿತ ತಿಳಿವಳಿಕೆಯು ಹೆಚ್ಚಾಗುತ್ತಾ ಬಂದಿದೆ. ಮುಟ್ಟಿನ ಸಂದರ್ಭದ ಅಗತ್ಯಗಳ ಕುರಿತು, ಆರೋಗ್ಯದ ಕುರಿತು ಸಾಕಷ್ಟು ಧನಾತ್ಮಕ ಚಿಂತನೆಗಳು, ಬೆಳವಣಿಗೆಗಳು ನಡೆದಿವೆ. ಬರಹಗಾರರು, ಕಾರ್ಯಕರ್ತರು, ಸಂಘಟನೆಗಳು ಮುಟ್ಟಿನ ಕುರಿತು ಆರೋಗ್ಯಕರವಾಗಿ ಸ್ಪಂದಿಸಿದ್ದಾರೆ. ಸ್ವತಂತ್ರ ಯುಟ್ಯೂಬ್ ಚಾನೆಲ್‍ಗಳು ‘ಮುಟ್ಟು ಎಂದರೇನು’ ಎಂಬ ಸಾರ್ವಜನಿಕ ಪ್ರಶ್ನೋತ್ತರ ಕಾರ್ಯಕ್ರಮಗಳನ್ನು ನಡೆಸಿವೆ. ಮಂಗಳೂರಿನ ಶ್ರೀನಿವಾಸ ಕಾರ್ಕಳ ಅವರು ದಶಕಕ್ಕೂ ಹಿಂದೆಯೇ ‘ಮುಟ್ಟು ಮುಟ್ಟೇಂದೇಕೆ ಹೀಯಾಳಿಸುವಿರಿ?/ಮುಟ್ಟಿನಿಂದಲ್ಲವೇ ನಮ್ಮೆಲ್ಲ ಹುಟ್ಟು/ ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು..’ ಎಂದು ಬರೆದ ಹಾಡು ಅಸಂಖ್ಯಾತ ಮಹಿಳಾ ತರಬೇತಿಗಳಲ್ಲಿ, ಕಾರ್ಯಕ್ರಮಗಳಲ್ಲಿ ಮುಟ್ಟಿನ ಕುರಿತಾದ ಮುಜುಗರವನ್ನು ಹೊಡೆದೋಡಿಸಿದೆ.

ಬೆಂಗಳೂರಿನಲ್ಲಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಯುವ ಜೋಡಿಯೊಂದು ಮುಟ್ಟಿನ ಕುರಿತು ತಿಳಿವಳಿಕೆ ಹೆಚ್ಚಿಸಲು ತಮ್ಮ ಕೆಲಸಕ್ಕೆ ತಿಲಾಂಜಲಿ ಕೊಟ್ಟು ಸಖೀಭವ ಎಂಬ ಸಂಸ್ಥೆಯೊಂದನ್ನು ಸ್ಥಾಪಿಸಿ, ‘ಸುಸ್ಥಿರ ಮುಟ್ಟಿನ ಆರೋಗ್ಯ’ ಕುರಿತು ಆಂದೋಲನವನ್ನೇ ನಡೆಸಿದೆ. ಈ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿರುವ ಜ್ಯೋತಿ ಇಟ್ನಾಳ್ ಮುಟ್ಟಿನ ಆಚರಣೆಗಳು ಹಾಗೂ ವಿಧಿ ನಿಷೇಧಗಳ ಕುರಿತಾಗಿಯೇ ಪಿಎಚ್‍ಡಿ ಸಂಶೋಧನೆಗೆ ಕೈಹಾಕಿದ್ದಾರೆ.

ಕಳೆದ ವರ್ಷ ಭೀಕರ ಪ್ರವಾಹ ಮತ್ತು ಭೂಕುಸಿತಕ್ಕೆ ತುತ್ತಾಗಿದ್ದ ಕೇರಳದಲ್ಲಿ ಮುಟ್ಟಾದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‍ನ ಬದಲಿಗೆ ಮುಟ್ಟಿನ ಬಟ್ಟಲುಗಳನ್ನು ಒದಗಿಸುವ ಕ್ರಾಂತಿಕಾರಿ ಕ್ರಮವನ್ನು ಅನುಸರಿಸಲಾಯಿತು. ಇದೇ ಮಾರ್ಗವನ್ನು ಅನುಸರಿಸಿ ಕಳೆದ ತಿಂಗಳು ಕರ್ನಾಟಕದ ಪ್ರವಾಹದ ಸಂದರ್ಭದಲ್ಲಿ ಶಿವಲೀಲಾ, ಸಂಜ್ಯೋತಿ, ದೀಪಾ ಮತ್ತು ಜ್ಯೋತಿಯವರ ಮುಂದಾಳತ್ವದಲ್ಲಿ ಸಾವಿರಾರು ಮುಟ್ಟಿನ ಬಟ್ಟಲುಗಳು ಪ್ರವಾಹಸಂತ್ರಸ್ತ ಮಹಿಳೆಯರಿಗೆ ಉಚಿತವಾಗಿ ವಿತರಿಸಿ, ಅದರ ಬಳಕೆಯ ಕುರಿತು ತಿಳಿಸಿಕೊಡಲಾಗಿದೆ. ಮುಟ್ಟಿನ ಕುರಿತು ವೈಜ್ಞಾನಿಕ ಮಾಹಿತಿ, ಆಚರಣೆಗಳು ಇತ್ಯಾದಿಗಳ ಜೊತೆಗೆ, ಗಂಡಸರು ಮುಟ್ಟನ್ನು ಎದುರುಗೊಂಡ ಬಗೆಯೂ ಸಾರ್ವಜನಿಕ ಚರ್ಚೆಯ ವಲಯ ಪ್ರವೇಶಿಸಿರುವದು ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ.

ಹೀಗೆ ಒಂದು ಕಡೆ ಮುಟ್ಟಿನ ಕುರಿತಾದ ಸಂಕುಚಿತತೆಯ ನೆರಳಿನಲ್ಲೇ ಮುಟ್ಟಿನ ಕುರಿತಾದ ಅರಿವು ಹೆಚ್ಚಿಸುವ ಬೆಳಕು ಮೂಡುತ್ತಿರುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದ್ಭುತವಾದ ಲೇಖನ. ಈ ಲೇಖನವನ್ನು “ಡಾಬಸ್ ಪೇಟೆ ವಾಯ್ಸ್” ಕನ್ನಡ ಮಾಸಪತ್ರಿಕೆಯ ನವೆಂಬರ್ ಸಂಚಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....