Homeಮುಖಪುಟಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

- Advertisement -
- Advertisement -

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಎನ್‌ಸಿಪಿಯಿಂದ ಬಂಡೆದ್ದ ಸಂಸದರಾದ ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಶರದ್ ಪವಾರ್ ಪಕ್ಷದಿಂದ ಉಚ್ಚಾಟಿಸಿದ್ದಾರೆ.

ಜೊತೆಗೆ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದೆ.

ಇನ್ನೊಂದೆಡೆ ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಹೇಳಿಕೊಂಡಿರುವ ಅಜಿತ್ ಪವಾರ್ ಬಣ ಮೇಲಿನ ಉಚ್ಚಾಟನೆಗಳಿಗೆ ಯಾವುದೇ ಮಾನ್ಯತೆ ಇಲ್ಲ ಎಂದಿದೆ. ಅಲ್ಲದೇ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್‌ರನ್ನು ಪಕ್ಷದಿಂದ ಉಚ್ಚಾಟಿಸಿದೆ. ಆ ಸ್ಥಾನಕ್ಕೆ ಸುನೀಲ್ ತಟ್ಕರೆಯವರನ್ನು ಹೆಸರಿಸಿದೆ.

“ಪಕ್ಷದಲ್ಲಿ ಬಹುಮತದ ನಿರ್ಧಾರವನ್ನು ಒಪ್ಪಿಕೊಳ್ಳುವಂತೆ ನಾವು ಶರದ್ ಪವಾರ್ ಅವರನ್ನು ವಿನಂತಿಸುತ್ತೇವೆ. ನಾವು ಅವರ ಆಶೀರ್ವಾದವನ್ನು ಬಯಸುತ್ತೇವೆ,” ಅಜಿತ್ ಪವಾರ್ ಅವರು ಆಕಸ್ಮಿಕವಾಗಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ, ಬದಲಾಗಿ ನಾವೆಲ್ಲರೂ ಸೇರಿ ತೀರ್ಮಾನಿಸಿದ್ದೇವೆ. ಈಗ ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ, ಪಕ್ಷ ಮತ್ತು ಚಿಹ್ನೆ ಯಾರಿಗೆ ಸೇರಿದೆ ಎಂಬುದನ್ನು ಭಾರತ ಚುನಾವಣಾ ಆಯೋಗ ನಿರ್ಧರಿಸುತ್ತದೆ” ಎಂದು ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಈ ಹಿಂದೆಯೂ ಮುಖ್ಯ ಸಚೇತಕರಾಗಿದ್ದ ಅನಿಲ್ ಭೈದಾಸ್ ಪಾಟೀಲ್ ಅವರೇ ನಮ್ಮ ವಿಪ್ ಆಗಿ ಮುಂದುವರಿಯುತ್ತಾರೆ ಎಂದು ಸ್ಪೀಕರ್ ಅವರಿಗೆ ತಿಳಿಸಿದ್ದೇವೆ. ನಾವು ಯಾವುದೇ ನೇಮಕಾತಿಯನ್ನು ಮಾಡಬೇಕಾಗಿದ್ದರೂ, ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ ನಾವು ಎಲ್ಲವನ್ನೂ ಅಧಿಕೃತವಾಗಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

9 ಶಾಸಕರನ್ನು ಅನರ್ಹಗೊಳಿಸುವ ಶರದ್ ಪವಾರ್‌ರವರ ಪತ್ರದ ಕುರಿತು ಮಾತನಾಡಿದ ಅವರು, “ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ಯಾವುದೇ ಪಕ್ಷದಿಂದ ಯಾವುದೇ ಅನರ್ಹತೆ ಅಥವಾ ಅಮಾನತು ಮಾಡಲಾಗುವುದಿಲ್ಲ. ಚುನಾವಣಾ ಆಯೋಗಕ್ಕೂ ಆ ಹಕ್ಕಿಲ್ಲ. ಹಕ್ಕು ಇರುವುದು ಸ್ಪೀಕರ್‌ಗೆ ಮಾತ್ರ ಮತ್ತು ಅದು ಧೀರ್ಘ ಪ್ರಕ್ರಿಯೆಯಾಗಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ: ಕರಾದ್‌ನಲ್ಲಿ ಶರದ್ ಪವಾರ್ ಶಕ್ತಿಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...