Homeಮುಖಪುಟಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

- Advertisement -
- Advertisement -

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಎನ್‌ಸಿಪಿಯಿಂದ ಬಂಡೆದ್ದ ಸಂಸದರಾದ ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಶರದ್ ಪವಾರ್ ಪಕ್ಷದಿಂದ ಉಚ್ಚಾಟಿಸಿದ್ದಾರೆ.

ಜೊತೆಗೆ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದೆ.

ಇನ್ನೊಂದೆಡೆ ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಹೇಳಿಕೊಂಡಿರುವ ಅಜಿತ್ ಪವಾರ್ ಬಣ ಮೇಲಿನ ಉಚ್ಚಾಟನೆಗಳಿಗೆ ಯಾವುದೇ ಮಾನ್ಯತೆ ಇಲ್ಲ ಎಂದಿದೆ. ಅಲ್ಲದೇ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್‌ರನ್ನು ಪಕ್ಷದಿಂದ ಉಚ್ಚಾಟಿಸಿದೆ. ಆ ಸ್ಥಾನಕ್ಕೆ ಸುನೀಲ್ ತಟ್ಕರೆಯವರನ್ನು ಹೆಸರಿಸಿದೆ.

“ಪಕ್ಷದಲ್ಲಿ ಬಹುಮತದ ನಿರ್ಧಾರವನ್ನು ಒಪ್ಪಿಕೊಳ್ಳುವಂತೆ ನಾವು ಶರದ್ ಪವಾರ್ ಅವರನ್ನು ವಿನಂತಿಸುತ್ತೇವೆ. ನಾವು ಅವರ ಆಶೀರ್ವಾದವನ್ನು ಬಯಸುತ್ತೇವೆ,” ಅಜಿತ್ ಪವಾರ್ ಅವರು ಆಕಸ್ಮಿಕವಾಗಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ, ಬದಲಾಗಿ ನಾವೆಲ್ಲರೂ ಸೇರಿ ತೀರ್ಮಾನಿಸಿದ್ದೇವೆ. ಈಗ ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ, ಪಕ್ಷ ಮತ್ತು ಚಿಹ್ನೆ ಯಾರಿಗೆ ಸೇರಿದೆ ಎಂಬುದನ್ನು ಭಾರತ ಚುನಾವಣಾ ಆಯೋಗ ನಿರ್ಧರಿಸುತ್ತದೆ” ಎಂದು ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಈ ಹಿಂದೆಯೂ ಮುಖ್ಯ ಸಚೇತಕರಾಗಿದ್ದ ಅನಿಲ್ ಭೈದಾಸ್ ಪಾಟೀಲ್ ಅವರೇ ನಮ್ಮ ವಿಪ್ ಆಗಿ ಮುಂದುವರಿಯುತ್ತಾರೆ ಎಂದು ಸ್ಪೀಕರ್ ಅವರಿಗೆ ತಿಳಿಸಿದ್ದೇವೆ. ನಾವು ಯಾವುದೇ ನೇಮಕಾತಿಯನ್ನು ಮಾಡಬೇಕಾಗಿದ್ದರೂ, ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ ನಾವು ಎಲ್ಲವನ್ನೂ ಅಧಿಕೃತವಾಗಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

9 ಶಾಸಕರನ್ನು ಅನರ್ಹಗೊಳಿಸುವ ಶರದ್ ಪವಾರ್‌ರವರ ಪತ್ರದ ಕುರಿತು ಮಾತನಾಡಿದ ಅವರು, “ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ಯಾವುದೇ ಪಕ್ಷದಿಂದ ಯಾವುದೇ ಅನರ್ಹತೆ ಅಥವಾ ಅಮಾನತು ಮಾಡಲಾಗುವುದಿಲ್ಲ. ಚುನಾವಣಾ ಆಯೋಗಕ್ಕೂ ಆ ಹಕ್ಕಿಲ್ಲ. ಹಕ್ಕು ಇರುವುದು ಸ್ಪೀಕರ್‌ಗೆ ಮಾತ್ರ ಮತ್ತು ಅದು ಧೀರ್ಘ ಪ್ರಕ್ರಿಯೆಯಾಗಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ: ಕರಾದ್‌ನಲ್ಲಿ ಶರದ್ ಪವಾರ್ ಶಕ್ತಿಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...