Homeಮುಖಪುಟಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ಪರಸ್ಪರ ಉಚ್ಚಾಟನೆ ಪರ್ವ: ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಉಚ್ಚಾಟನೆ

- Advertisement -
- Advertisement -

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಎನ್‌ಸಿಪಿಯಿಂದ ಬಂಡೆದ್ದ ಸಂಸದರಾದ ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಶರದ್ ಪವಾರ್ ಪಕ್ಷದಿಂದ ಉಚ್ಚಾಟಿಸಿದ್ದಾರೆ.

ಜೊತೆಗೆ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದೆ.

ಇನ್ನೊಂದೆಡೆ ನಮ್ಮದೇ ಅಧಿಕೃತ ಎನ್‌ಸಿಪಿ ಎಂದು ಹೇಳಿಕೊಂಡಿರುವ ಅಜಿತ್ ಪವಾರ್ ಬಣ ಮೇಲಿನ ಉಚ್ಚಾಟನೆಗಳಿಗೆ ಯಾವುದೇ ಮಾನ್ಯತೆ ಇಲ್ಲ ಎಂದಿದೆ. ಅಲ್ಲದೇ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್‌ರನ್ನು ಪಕ್ಷದಿಂದ ಉಚ್ಚಾಟಿಸಿದೆ. ಆ ಸ್ಥಾನಕ್ಕೆ ಸುನೀಲ್ ತಟ್ಕರೆಯವರನ್ನು ಹೆಸರಿಸಿದೆ.

“ಪಕ್ಷದಲ್ಲಿ ಬಹುಮತದ ನಿರ್ಧಾರವನ್ನು ಒಪ್ಪಿಕೊಳ್ಳುವಂತೆ ನಾವು ಶರದ್ ಪವಾರ್ ಅವರನ್ನು ವಿನಂತಿಸುತ್ತೇವೆ. ನಾವು ಅವರ ಆಶೀರ್ವಾದವನ್ನು ಬಯಸುತ್ತೇವೆ,” ಅಜಿತ್ ಪವಾರ್ ಅವರು ಆಕಸ್ಮಿಕವಾಗಿ ಸರ್ಕಾರಕ್ಕೆ ಬೆಂಬಲ ಸೂಚಿಸಿಲ್ಲ, ಬದಲಾಗಿ ನಾವೆಲ್ಲರೂ ಸೇರಿ ತೀರ್ಮಾನಿಸಿದ್ದೇವೆ. ಈಗ ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ, ಪಕ್ಷ ಮತ್ತು ಚಿಹ್ನೆ ಯಾರಿಗೆ ಸೇರಿದೆ ಎಂಬುದನ್ನು ಭಾರತ ಚುನಾವಣಾ ಆಯೋಗ ನಿರ್ಧರಿಸುತ್ತದೆ” ಎಂದು ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಈ ಹಿಂದೆಯೂ ಮುಖ್ಯ ಸಚೇತಕರಾಗಿದ್ದ ಅನಿಲ್ ಭೈದಾಸ್ ಪಾಟೀಲ್ ಅವರೇ ನಮ್ಮ ವಿಪ್ ಆಗಿ ಮುಂದುವರಿಯುತ್ತಾರೆ ಎಂದು ಸ್ಪೀಕರ್ ಅವರಿಗೆ ತಿಳಿಸಿದ್ದೇವೆ. ನಾವು ಯಾವುದೇ ನೇಮಕಾತಿಯನ್ನು ಮಾಡಬೇಕಾಗಿದ್ದರೂ, ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ ನಾವು ಎಲ್ಲವನ್ನೂ ಅಧಿಕೃತವಾಗಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

9 ಶಾಸಕರನ್ನು ಅನರ್ಹಗೊಳಿಸುವ ಶರದ್ ಪವಾರ್‌ರವರ ಪತ್ರದ ಕುರಿತು ಮಾತನಾಡಿದ ಅವರು, “ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ಯಾವುದೇ ಪಕ್ಷದಿಂದ ಯಾವುದೇ ಅನರ್ಹತೆ ಅಥವಾ ಅಮಾನತು ಮಾಡಲಾಗುವುದಿಲ್ಲ. ಚುನಾವಣಾ ಆಯೋಗಕ್ಕೂ ಆ ಹಕ್ಕಿಲ್ಲ. ಹಕ್ಕು ಇರುವುದು ಸ್ಪೀಕರ್‌ಗೆ ಮಾತ್ರ ಮತ್ತು ಅದು ಧೀರ್ಘ ಪ್ರಕ್ರಿಯೆಯಾಗಿದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಶರಣಾಗುವುದಿಲ್ಲ: ಕರಾದ್‌ನಲ್ಲಿ ಶರದ್ ಪವಾರ್ ಶಕ್ತಿಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...