Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...