Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...