Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...