Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...