Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...