Homeಅಂತರಾಷ್ಟ್ರೀಯಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಪರಸ್ಪರ ಗೌರವ, ಬೆಂಬಲ ಮುಖ್ಯ: ಪ್ರಧಾನಿಯ ಸ್ವಾತಂತ್ರ್ಯ ದಿನದ ಭಾಷಣದ ಬಗ್ಗೆ ಚೀನಾ ಹೇಳಿಕೆ

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

- Advertisement -
- Advertisement -

ಪರಸ್ಪರ ಗೌರವ ಇಟ್ಟುಕೊಂಡು ಮತ್ತು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಹೇಳಿದೆ. ಉಭಯ ದೇಶಗಳಿಗೆ ಮುಂದಿನ ಸರಿಯಾದ ಮಾರ್ಗ ‘ಪರಸ್ಪರ ಗೌರವಿಸುವುದು’ ಎಂದು ಅದು ಹೇಳಿದೆ.

“ಎಲ್‌ಒಸಿ (ಲೈನ್ ಆಫ್ ಕಂಟ್ರೋಲ್) ನಿಂದ ಎಲ್ಎಸಿ (ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ವರೆಗೆ, ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟರೆ, ಸಶಸ್ತ್ರ ಪಡೆಗಳು ಅವರ ಭಾಷೆಯಲ್ಲಿಯೇ ಪ್ರತಿಕ್ರಿಯಿಸಿವೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಚೀನಾ ಎಂದು ಹೆಸರಿಸದೆ ಪೂರ್ವ ಲಡಾಕ್‌ನಲ್ಲಿ ನಡೆದ ಗಡಿ ಸಂಘರ್ಷವನ್ನೂ ಮೋದಿ ಉಲ್ಲೇಖಿಸಿದ್ದರು.

“ಭಾರತದ ಸಮಗ್ರತೆಯು ನಮಗೆ ಸರ್ವೋಚ್ಚವಾಗಿದೆ. ನಾವು ಏನು ಮಾಡಬಹುದು, ನಮ್ಮ ಸೈನಿಕರು ಏನು ಮಾಡಬಹುದು ಎಂಬುದನ್ನು ಎಲ್ಲರೂ ನೋಡಿದ್ದಾರೆ” ಎಂದು ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರ ಗಡಿ ಘರ್ಷಣೆಯನ್ನು ಉಲ್ಲೇಖಿಸಿ ಮೋದಿ ಹೇಳಿದರು.

ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನಾ ಸಹ ಸಾವುನೋವುಗಳನ್ನು ಅನುಭವಿಸಿದೆ ಎಂದು ಒಪ್ಪಿಕೊಂಡಿದೆ. ಆದರೆ ನಿಖರವಾದ ಸಾವಿನ ಸಂಖ್ಯೆಯನ್ನು ಉಲ್ಲೇಖಿಸಿಲ್ಲ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಗೆ ಮೋದಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ, “ನಾವು ನಿಕಟವರ್ತಿ ನೆರೆಹೊರೆಯವರು, ನಮ್ಮದು ಒಂದು ಶತಕೋಟಿಗೂ ಹೆಚ್ಚು ಜನರಿರುವ ಉದಯೋನ್ಮುಖ ರಾಷ್ಟ್ರಗಳು” ಎಂದು ಹೇಳಿದ್ದಾರೆ.

ಆದ್ದರಿಂದ ದ್ವಿಪಕ್ಷೀಯ ಸಂಬಂಧಗಳ ಉತ್ತಮ ಅಭಿವೃದ್ಧಿಯು ಎರಡು ರಾಷ್ಟ್ರಗಳ ಹಿತಾಸಕ್ತಿಗೆ ಮಾತ್ರವಲ್ಲದೆ, ಸ್ಥಿರತೆ, ಶಾಂತಿ, ಪ್ರದೇಶದ ಸಮೃದ್ಧಿ ಮತ್ತು ಇಡೀ ಪ್ರಪಂಚವನ್ನು ಸಹ ಪೊರೆಯುತ್ತದೆ.

ಇದು ನಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ನೆರವಾಗುವುದರಿಂದ ಪರಸ್ಪರ ಗೌರವ ನೀಡಿ ಮತ್ತು ಬೆಂಬಲಿಸುವುದು ಎರಡೂ ಕಡೆಯಿಂದ ಸರಿಯಾದ ಮಾರ್ಗವಾಗಿದೆ” ಎಂದು ಝಾವೋ ಸೋಮವಾರ ಸಚಿವಾಲಯದ ಸಮಾವೇಶದಲ್ಲಿ ಹೇಳಿದರು.

“ಆದ್ದರಿಂದ, ನಮ್ಮ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಹಂತ ಹಂತದ ಪ್ರಾಯೋಗಿಕ ಸಹಕಾರವನ್ನು ಮತ್ತು ದ್ವಿಪಕ್ಷೀಯ ಸಂಬಂಧಗಳ ದೀರ್ಘಕಾಲೀನ ಬೆಳವಣಿಗೆಯನ್ನು ಕಾಪಾಡಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 8 ರಂದು ಬೀಜಿಂಗ್ ಮತ್ತು ನವದೆಹಲಿ ನಡುವೆ ಇತ್ತೀಚಿನ ದೊಡ್ಡ ಮಟ್ಟದ ಮಾತುಕತೆಯ ನಂತರ, ಭಾರತ ತನ್ನ ನಿಲುವನ್ನು ಬದಲಾಯಿಸುವ ಯಾವುದೇ ಲಕ್ಷಣವನ್ನು ತೋರಿಸಿಲ್ಲ.

ಮೋದಿಯವರ ಭಾಷಣವನ್ನು ಉಲ್ಲೇಖಿಸಿ ಝಾವೋ ಇದನ್ನು ಎರಡು ದೃಷ್ಟಿಕೋನಗಳಿಂದ ವಿವರಿಸಬಹುದು ಎಂದು ಹೇಳಿದರು.

ಒಂದು, ಮೋದಿಯವರು ಯುದ್ಧದ ಮನೋಭಾವವನ್ನು ಹೊಂದಿದ್ದಾರೆ. ಇನ್ನೊಂದು, ಚೀನಾ ಬಗ್ಗೆ ತನ್ನ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಸಾಕಷ್ಟು ಮಾಡಿದೆ ಎಂದು ಭಾರತ ಸರ್ಕಾರ ಭಾವಿಸಿದೆ ಎಂಬ ಅರ್ಥದಲ್ಲಿ ಗ್ರಹಿಸಬಹುದು. ಆದ್ದರಿಂದ, ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದು ಮುಖ್ಯವಲ್ಲ. ಆದರೆ ಮುಂದೆ ಅವರು ಏನು ಮಾಡುತ್ತಾರೆ ಎಂಬುದು ಮುಖ್ಯ ಎಂದರು.


ಇದನ್ನೂ ಓದಿ: ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...