Homeಮುಖಪುಟಮುಜಾಫರ್‌ನಗರ: ಗ್ರಾ.ಪಂ ಅಧ್ಯಕ್ಷ ಕೊಲೆ ಪ್ರಕರಣ- 10 ವರ್ಷಗಳ ಬಳಿಕ ಐವರಿಗೆ ಜೀವಾವಧಿ ಶಿಕ್ಷೆ

ಮುಜಾಫರ್‌ನಗರ: ಗ್ರಾ.ಪಂ ಅಧ್ಯಕ್ಷ ಕೊಲೆ ಪ್ರಕರಣ- 10 ವರ್ಷಗಳ ಬಳಿಕ ಐವರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಸುಮಾರು ಹತ್ತು ವರ್ಷಗಳ ಹಿಂದೆ ಮುಜಾಫರ್‌ನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜಾಫರ್‌ನಗರದ ನ್ಯಾಯಾಲಯವು ಶನಿವಾರ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2011ರ ಜನವರಿ 25ರಂದು ಹಳೆ ದ್ವೇಷದ ಹಿನ್ನೆಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮದ ಪ್ರಧಾನ್ ಬ್ರಿಜೇಂದ್ರ ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪದ ಮೇಲೆ ಬಹಾವಡಿ ಗ್ರಾಮದ ನಿವಾಸಿಗಳಾದ ಚರಣ್ ಸಿಂಗ್, ಬ್ರಿಜ್ಪಾಲ್, ಸೊರನ್, ನರೇಶ್ ಮತ್ತು ವಿವೇಕ್ ಅವರಿಗೆ ವಿಶೇಷ ನ್ಯಾಯಾಧೀಶರಾದ ಜಮ್‌ಶೆಡ್ ಅಲಿ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ ಐವರು ಅಪರಾಧಿಗಳಿಗೆ ತಲಾ 14,000 ರೂಪಾಯಿ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ಭಗತ್‌ಸಿಂಗ್‌ಗೆ ಗಲ್ಲುಶಿಕ್ಷೆಯಾಗಲು ಆರ್‌ಎಸ್‌ಎಸ್ ನಾಯಕ ಹೆಡ್ಗೆವಾರ್‌ ಸಹವರ್ತಿ ಕಾರಣವೆ?

ಐವರನ್ನು ತಪ್ಪಿತಸ್ಥರೆಂದು ಘೋಷಿಸಿರುವ ನ್ಯಾಯಾಲಯವು ಇತರ ಮೂವರು ಆರೋಪಿಗಳಾದ ಬಸಂತ್, ಬಂಟಿ ಮತ್ತು ಉಮಿತ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮೂವರನ್ನು ಖುಲಾಸೆಗೊಳಿಸಿದೆ ಎಂದು ಸರ್ಕಾರಿ ವಕೀಲ ಯಶಪಾಲ್ ಸಿಂಗ್ ಹೇಳಿದ್ದಾರೆ.

2011ರ ಜನವರಿ 25ರಂದು ಹಳೆ ದ್ವೇಷದ ಹಿನ್ನೆಲೆ ಜಿಲ್ಲೆಯ ಬಹಾವಡಿ ಗ್ರಾಮದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಗ್ರಾಮದ ಪ್ರಧಾನ್‌ನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಎಂಟು ಮಂದಿ ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನ, ಮಾರಕಾಸ್ತ್ರಗಳನ್ನು ಬಳಸಿ ಗಲಭೆ ಎಸಗಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯದ ಆವರಣದಲ್ಲೇ ಗುಂಡು ಹಾರಿಸಿ ಹತ್ಯೆಗೈಯಲಾಗಿದ್ದ ದೇವೇಂದ್ರ ಎನ್ನುವವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು.


ಇದನ್ನೂ ಓದಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...