Homeಮುಖಪುಟಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

ಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಶಾಲಾ ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿಗಳಿಗೆ ಹೇಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉತ್ತರ ಪ್ರದೇಶದ  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸಿ ಎಂದು ಬಿಜೆಪಿಗೆ ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಬಿಜೆಪಿಗರು ದೇಶದಲ್ಲಿ ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಕಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ  ಸಹಪಾಠಿ ವಿದ್ಯಾರ್ಥಿಗಳಿಗೆ ಹೇಳುವುದು ಬಿಜೆಪಿಯ ದ್ವೇಷ  ಹರಡುವ ಅಜೆಂಡಾದ ಫಲಿತಾಂಶವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸುವಂತೆ  ಬಿಜೆಪಿ ಪಕ್ಷವನ್ನು ಕೇಳಿದ್ದಾರೆ. ಜಿ 20 ಅಧ್ಯಕ್ಷ ಸ್ಥಾನವನ್ನು ಭಾರತ ಪಡೆದಿರುವುದರಿಂದ ಈ ಬಾರಿ ಜಿ 20 ಸಭೆಯನ್ನು ಭಾರತದಲ್ಲಿ ನಡೆಯಲಿದೆ.

ಅಖಿಲೇಶ್ ಯಾದವ್ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಹೇಳಿಕೆಯ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಂಡಿದ್ದು,  G20ನಲ್ಲಿ ಈ ವಿಡಿಯೋವನ್ನು ತೋರಿಸುವ ಮೂಲಕ  ದ್ವೇಷದ ಅಜೆಂಡಾ ಸರಿಯಾಗಿದೆ ಎಂದು ಸಾಬೀತುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ವೈರಲ್ ವೀಡಿಯೊದಲ್ಲಿ, ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಮಗುವಿಗೆ ಇತರ ಮಕ್ಕಳಿಗೆ ಥಳಿಸಲು ಹೇಳುವುದು ನೋಡಿದೆ.  ಇದರಲ್ಲಿ ಶಿಕ್ಷಕಿ ಎರಡು ವಿಚಾರದಲ್ಲಿ ಅಪರಾಧಿ, ಆಕೆ ಬಾಲಕನಿಗೆ ಥಳಿಸಿದ್ದಾಳೆ ಮತ್ತು ಇತರ ಮಕ್ಕಳನ್ನು ಕೆರಳುವಂತೆ ಮಾಡಿದ್ದಾಳೆ. ಬಿಜೆಪಿ ಸರ್ಕಾರ ಈ ವೀಡಿಯೊವನ್ನು ತೋರಿಸಿ G20 ಸಭೆಯಲ್ಲಿ ತಮ್ಮ ದ್ವೇಷದ ಅಜೆಂಡಾ ಹೇಗೆ ಸರಿ ಎಂಬುದನ್ನು ಸಾಬೀತುಪಡಿಸಬೇಕು. ಅಂತಹ ಶಿಕ್ಷಕಿ ಸಮಾಜಕ್ಕೆ ಕಳಂಕ, ಇಡೀ ದೇಶದ ಶಿಕ್ಷಕರು ಆ ಶಿಕ್ಷಕಿಯ ವಿರುದ್ಧ  ಧ್ವನಿ ಎತ್ತಬೇಕು ಎಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

ಮುಜಾಫರ್‌ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕಿಯೊಬ್ಬರು  ಮುಸ್ಲಿಂ  ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ್ದು, ವಿದ್ಯಾರ್ಥಿಗಳು ಒಬ್ಬೊಬ್ಬರಾಗಿ ಮಗುವಿನ ಬಳಿ ಬಂದು ಮುಖಕ್ಕೆ ಮತ್ತು ಬೆನ್ನಿಗೆ ಹೊಡೆಯುತ್ತಾರೆ. ಇಡೀ ಘಟನೆಯನ್ನು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿ: ದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....