Homeಮುಖಪುಟಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

ಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಶಾಲಾ ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿಗಳಿಗೆ ಹೇಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉತ್ತರ ಪ್ರದೇಶದ  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸಿ ಎಂದು ಬಿಜೆಪಿಗೆ ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಬಿಜೆಪಿಗರು ದೇಶದಲ್ಲಿ ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಕಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ  ಸಹಪಾಠಿ ವಿದ್ಯಾರ್ಥಿಗಳಿಗೆ ಹೇಳುವುದು ಬಿಜೆಪಿಯ ದ್ವೇಷ  ಹರಡುವ ಅಜೆಂಡಾದ ಫಲಿತಾಂಶವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸುವಂತೆ  ಬಿಜೆಪಿ ಪಕ್ಷವನ್ನು ಕೇಳಿದ್ದಾರೆ. ಜಿ 20 ಅಧ್ಯಕ್ಷ ಸ್ಥಾನವನ್ನು ಭಾರತ ಪಡೆದಿರುವುದರಿಂದ ಈ ಬಾರಿ ಜಿ 20 ಸಭೆಯನ್ನು ಭಾರತದಲ್ಲಿ ನಡೆಯಲಿದೆ.

ಅಖಿಲೇಶ್ ಯಾದವ್ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಹೇಳಿಕೆಯ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಂಡಿದ್ದು,  G20ನಲ್ಲಿ ಈ ವಿಡಿಯೋವನ್ನು ತೋರಿಸುವ ಮೂಲಕ  ದ್ವೇಷದ ಅಜೆಂಡಾ ಸರಿಯಾಗಿದೆ ಎಂದು ಸಾಬೀತುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ವೈರಲ್ ವೀಡಿಯೊದಲ್ಲಿ, ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಮಗುವಿಗೆ ಇತರ ಮಕ್ಕಳಿಗೆ ಥಳಿಸಲು ಹೇಳುವುದು ನೋಡಿದೆ.  ಇದರಲ್ಲಿ ಶಿಕ್ಷಕಿ ಎರಡು ವಿಚಾರದಲ್ಲಿ ಅಪರಾಧಿ, ಆಕೆ ಬಾಲಕನಿಗೆ ಥಳಿಸಿದ್ದಾಳೆ ಮತ್ತು ಇತರ ಮಕ್ಕಳನ್ನು ಕೆರಳುವಂತೆ ಮಾಡಿದ್ದಾಳೆ. ಬಿಜೆಪಿ ಸರ್ಕಾರ ಈ ವೀಡಿಯೊವನ್ನು ತೋರಿಸಿ G20 ಸಭೆಯಲ್ಲಿ ತಮ್ಮ ದ್ವೇಷದ ಅಜೆಂಡಾ ಹೇಗೆ ಸರಿ ಎಂಬುದನ್ನು ಸಾಬೀತುಪಡಿಸಬೇಕು. ಅಂತಹ ಶಿಕ್ಷಕಿ ಸಮಾಜಕ್ಕೆ ಕಳಂಕ, ಇಡೀ ದೇಶದ ಶಿಕ್ಷಕರು ಆ ಶಿಕ್ಷಕಿಯ ವಿರುದ್ಧ  ಧ್ವನಿ ಎತ್ತಬೇಕು ಎಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

ಮುಜಾಫರ್‌ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕಿಯೊಬ್ಬರು  ಮುಸ್ಲಿಂ  ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ್ದು, ವಿದ್ಯಾರ್ಥಿಗಳು ಒಬ್ಬೊಬ್ಬರಾಗಿ ಮಗುವಿನ ಬಳಿ ಬಂದು ಮುಖಕ್ಕೆ ಮತ್ತು ಬೆನ್ನಿಗೆ ಹೊಡೆಯುತ್ತಾರೆ. ಇಡೀ ಘಟನೆಯನ್ನು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿ: ದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...