HomeUncategorizedಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಪ್ರತ್ಯೇಕ ಜಾಹೀರಾತುಗಳು ಪ್ರತಿಪಕ್ಷಗಳ ವ್ಯಂಗ್ಯಕ್ಕೆ ಕಾರಣವಾಗಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳ ಬಗ್ಗೆ ಲೇವಡಿ ಮಾಡಿದ್ದರು.

ಹೊಸ ಸರ್ಕಾರಕ್ಕೆ ಇಂದು ಮತದಾನ ಆರಂಭವಾಗಿರುವ ಬಿಹಾರದಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇತ್ತೀಚಿನ ಪ್ರಚಾರ ಭಿತ್ತಿಪತ್ರಗಳು ಮತ್ತು ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಣಿಸಿಕೊಂಡು ಬಿಹಾರದಲ್ಲಿ ಜೆಡಿಯು, ಬಿಜೆಪಿ ನಡುವಿನ ಮುನಿಸಿಗೆ ತೇಪೆ ಹಚ್ಚುವ ಕಾರ್ಯ ಮಾಡುತ್ತಿದೆ.

ನಿತೀತ್‌ ಕುಮಾರ್‌ ಅವರ ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಸ್ವಿ ಯಾದವ್ ಅವರು ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದರು.

ಈ ವ್ಯಂಗ್ಯಗಳಿಗೆ ಉತ್ತರ ಕೊಡುವ ಪ್ರಯತ್ನದಲ್ಲಿ ಎನ್‌ಡಿಎ ಹೊಸ ಜಾಹೀರಾತುಗಳನ್ನ ಬಿಡುಗಡೆ ಮಾಡಿದೆ. ಈ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿ ಹಾಲಿ ಸಿಎಂ ನಿತೀಶ್ ಕುಮಾರ್ ಜೊತೆಗಿರುವ ಜಾಹೀರಾತುಗಳು, ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ub575seg

ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಕಾಣಿಸಿಕೊಂಡಿರುವ ಹೊಸ ಜಾಹೀರಾತುಗಳಲ್ಲಿ, ಪಿಎಂ ಮೋದಿ ಮತ್ತು ನಿತೀಶ್ ಕುಮಾರ್ ಇಬ್ಬರು ಇದ್ದಾರೆ. ಆದರೆ, ಒಂದು ಜಾಹೀರಾತಿನಲ್ಲಿ, ನಿತೀಶ್ ಕುಮಾರ್ ಅವರನ್ನು ಏಕೈಕ ಎನ್‌ಡಿಎ ಮುಖವಾಗಿ ಗುರುತಿಸಲಾಗಿದ್ದು, ಉಳಿದವರೆಲ್ಲಾ ಬಿಜೆಪಿ ನಾಯಕರಿದ್ದಾರೆ.

0t3e8r3g

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

“ಬಿಜೆಪಿ ಹೈ ತೋ ಭರೋಸಾ ಹೈ (ಬಿಜೆಪಿ ಇರುವಲ್ಲಿ, ನಂಬಿಕೆ ಇದೆ)” ಎಂಬ ಸಂದೇಶವನ್ನು ಹೊಂದಿರುವ ಜಾಹೀರಾತು ಕೇಂದ್ರ ಸರ್ಕಾರದ ಯೋಜನೆಗಳನ್ನು ಪಟ್ಟಿ ಮಾಡಿ, ಬಿಹಾರಕ್ಕೂ ಅದೇ ಭರವಸೆ ನೀಡುತ್ತದೆ ಎಂದಿದೆ.

ಈ ಹಿಂದಿನ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಜಾಹೀರಾತಿನಲ್ಲಿ ಎಲ್ಲಿಯೂ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು ವ್ಯಂಗ್ಯವಾಡಿತ್ತು.

0p55fkrg

ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಚುನಾವಣಾ ಕಾರ್ಯಕ್ರಮದ ದಿನದಂದು ಮುಖ್ಯಮಂತ್ರಿ ನಿತೀಶ್‌ಕುಮಾರ್ ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.


ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...